NEWSನಮ್ಮಜಿಲ್ಲೆ

ಅಂಗನವಾಡಿ ಆಹಾರ ಪದಾರ್ಥ ಫಲಾನುಭವಿಗಳ ಮನೆಬಾಗಿಲಿಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್‍ಡೌನ್ ಅವಧಿಯು ಮೇ 17ರವರೆಗೆ ವಿಸ್ತರಿಸಿದ್ದು ಹಾಗೂ 2020-21ನೇ ಸಾಲಿನ ಅಂಗನವಾಡಿ ಕೇಂದ್ರದ ಬೇಸಿಗೆ ರಜೆಯು ಮೇ 30ರವರೆಗೆ ಘೋಷಿಸಲಾಗಿರುತ್ತದೆ.

ಈ ರಜೆ ಅವಧಿಯಲ್ಲಿ ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ಬಳಸುವ ಆಹಾರ ಪದಾರ್ಥಗಳನ್ನು ಲೆಕ್ಕ ಹಾಕಿ ಮನೆಗೆ ವಿತರಿಸಲು ನಿರ್ದೇಶಿಸಲಾಗಿದೆ. ಅದರಂತೆ 6 ತಿಂಗಳಿಂದ 6 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣಿ, ಬಾಣಂತಿಯರಿಗೆ ಆಹಾರ ಪದಾರ್ಥಗಳನ್ನು ಮನೆಗೆ ಬಾಗಿಲಿಗೆ ವಿತರಿಸಲು ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ ತಿಳಿಸಿದ್ದಾರೆ.

ಆದೇಶದ ಪ್ರಕಾರ 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳಿಗೆ ನ್ಯೂಟ್ರಿಮಿಕ್ಸ್, ಹಾಲಿನಪುಡಿ, ಸಕ್ಕರೆ, ಸಾಧಾರಣಾ ಮತ್ತು ತೀವ್ರ ಅಪೌಷ್ಟಿಕ ಮಕ್ಕಳಿಗೆ ಮೊಟ್ಟೆ, 3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಗೋಧಿ ಸಜ್ಜಿಗೆ ಪುಡಿ, ಬೆಲ್ಲಾ, ಶೇಂಗಾ, ಹೆಸರು ಕಾಳು, ಅಕ್ಕಿ, ತೊಗರಿ ಬೇಳೆ, ಹಾಲಿಪುಡಿ, ಸಕ್ಕರೆ, ಮೊಟ್ಟೆ ಹಾಗೂ ಗರ್ಭಿಣಿ ಮತ್ತು ಬಾಣಂತಿಯರಿಗೆ ಬೆಲ್ಲಾ, ಶೇಂಗಾ, ಅಕ್ಕಿ, ತೊಗರಿ ಬೇಳೆ, ಹಾಲಿನಪುಡಿ, ಸಕ್ಕರೆ, ಮೊಟ್ಟೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಮೂಲಕ ವಿತರಿಸಲು ಸೂಚಿಸಲಾಗಿದೆ.

ಆಹಾರ ಸಾಮಗ್ರಿಗಳು ತಲುಪದಿರುವ ಫಲಾನುಭವಿಗಳು ಸಮೀಪದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.

1 Comment

  • ಆಹಾರ ಸಾಮಗ್ರಿಗಳು ತಲುಪದಿರುವ ಫಲಾನುಭವಿಗಳು ಸಮೀಪದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯನ್ನ ಭೇಟಿ ಮಾಡಿ ಉಪಯೋಗ ಪಡೆಯಿರಿ

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್