CrimeNEWSನಮ್ಮಜಿಲ್ಲೆ

ಅಕ್ಕನ ಶೀಲ ಶಂಕಿಸಿದ ಭಾವನ ಕೊಚ್ಚಿ ಕೊಂದ ಭಾಮೈದ, ಪೊಲೀಸರಿಗೆ ಶರಣಾದ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅನೈತಿಕ ಸಂಬಂಧವಿದೆ ಎಂದು ಅಕ್ಕನಿಗೆ ಕಿರುಕುಳ ನೀಡುತ್ತಿದ್ದ ಭಾವನನ್ನು ಭಾಮೈದನೇ ಭೀಕರವಾಗಿ ಕೊಲೆ ಮಾಡಿದ ಬಳಕ ಆತನ ಕೈ ಕತ್ತರಿಸಿ ಅವುಗಳ ಸಮೇತ ಪೊಲೀಸರಿಗೆ ಶರಣಾಗಿರುವ ಘಟನೆ ಉದಯಗಿರಿಯಲ್ಲಿ ನಡೆದಿದೆ.

ಗೌಸಿಯಾ ನಗರದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಹಮದ್ ಸರಾನ್(27)ಎಂಬಾತ ಭೀಕರವಾಗಿ ಕೊಲೆಯಾದವ. ಈ  ಭಾಮೈದ ಕದೀರ್‌ ಪೊಲೀಸ್‌ ಠಾಣೆಗೆ ತಾನೆ ಹೋಗಿ ಶರಣಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಮಹಮದ್ ಸರಾನ್ ಮತ್ತು ರೂಬಿನಾ ಕಳೆದ ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಪತ್ನಿಗೆ ಬೇರೊಬ್ಬನ ಜೊತೆ ಅನೈತಿಕ ಸಂಬಂಧವಿದೆ ಎಂದು ಸರಾನ್ ಕಿರುಕುಳ ನೀಡುತ್ತಿದ್ದನು ಎಂದು ಹೇಳಲಾಗುತ್ತಿದೆ.

ಹೀಗಾಗಿ ಇವರಿಬ್ಬರ ನಡುವೆ ಪದೇಪದೆ ಜಗಳ ನಡೆಯುತ್ತಿತ್ತು. ಹಿರಿಯರು ಪಂಚಾಯಿತಿ ಮಾಡಿ ರಾಜಿ ಸಂಧಾನ ಮಾಡಿಸಿದ್ದರು. ಆದರೂ ತನ್ನ ಚಾಳಿಯನ್ನು ಸುರಾನ ಮುಂದುವರಿಸಿದ್ದ ಎಂದು ಹೇಳಲಾಗಿದೆ.

ಸರಾನ್ ಮತ್ತೆ ಮತ್ತೆ ಇದೇ ವಿಷಯವಾಗಿ ರೂಬಿನಾಳ ಜೊತೆ  ಗಲಾಟೆ ಮಾಡುತ್ತಿದ್ದ. ಇದೇ ಸಂದರ್ಭದಲ್ಲಿ ರೂಬಿನಾಳ ಸಹೋದರರಾದ ಖಲೀಂ ಪಾಷಾ, ಅಜ್ಮನ್ ಪಾಷಾ, ಹಲ್ಮತ್ ಪಾಷಾ ಮತ್ತು ಕದೀರ್ ಸರಾನ್ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ಬೀಸಿ ಕೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಹತ್ಯೆ ಮಾಡಿದ ನಂತರ ಕತ್ತರಿಸಿದ ಸರಾನ್ ಕೈಗಳನ್ನು ಚೀಲದಲ್ಲಿಟ್ಟುಕೊಂಡು ಕದೀರ್ ಉದಯಗಿರಿ ಪೊಲೀಸ್ ಠಾಣೆ ಬಂದು ಶರಣಾಗಿದ್ದಾನೆ. ಪೊಲೀಸರು ಈತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು