NEWSನಮ್ಮಜಿಲ್ಲೆನಮ್ಮರಾಜ್ಯ

ಅಡುಗೆ ಅನಿಲ ಇಂದಿನಿಂದ ಇನ್ನಷ್ಟು ತುಟ್ಟಿ: ಬೆಲೆ ಏರಿಕೆಯಿಂದ ಹೈರಾಣಾಗುತ್ತಿರುವ ಜನತೆ

ಬೆಂಗಳೂರಿನಲ್ಲಿ 14.2 ಕೆಜಿ ಗ್ಯಾಸ್‌ ಸಿಲಿಂಡರ್‌ಗೆ 837.5 ರೂಪಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಮೊದಲನೇ, ಎರಡನೇ ಅಲೆಯಿಂದ ಹಾಗೂ ಇಂಧನ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆಯಿಂದ ಈಗಾಗಲೇ ತತ್ತರಿಸಿ ಹೋಗಿರುವ ನಾಡಿನ ಜನತೆಗೆ ಮತ್ತೆ ಗ್ಯಾಸ್‌ ಸಿಲಿಂಡರ್‌ ದರ ಏರಿಸುವ ಮೂಲಕ ಶಾಕ್‌ ಕೊಟ್ಟಿದೆ.

ತೈಲ ಮಾರುಕಟ್ಟೆ ಕಂಪನಿಗಳು (OMCs) ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 14.2 ಕೆಜಿ ಅಡುಗೆ ಅನಿಲದ ಸಿಲಿಂಡರ್‌ನ ಬೆಲೆಯನ್ನು 25.50 ರೂ.ಗೆ ಹೆಚ್ಚಿಸಿದ್ದು, 2021 ರಲ್ಲಿ ಇದು ನಾಲ್ಕನೇ ಬಾರಿಯ ದರ ಏರಿಕೆಯಾಗಿದೆ.

ಈ ವರ್ಷದ ಜನವರಿ, ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿ ಕ್ರಮವಾಗಿ 25 ರೂ.ಗಳಂತೆ ದರ ಏರಿಕೆಯಾಗಿತ್ತು. ಏಪ್ರಿಲ್‌ ತಿಂಗಳಿನಲ್ಲೂ 10 ರೂ. ಏರಿಸಲಾಗಿತ್ತು. ಮೇ ಹಾಗೂ ಜೂನ್‌ ತಿಂಗಳಲ್ಲಿ ಯಾವುದೇ ಬೆಲೆ ಏರಿಕೆ ಆಗದಿದ್ದರೂ, ಇದೀಗ ಮತ್ತೆ 25 ರೂ.ಗಳಷ್ಟು ಏರಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಬೆಂಗಳೂರಿನಲ್ಲಿ ಈಗ 14.2 ಕೆಜಿ ಗ್ಯಾಸ್‌ ಸಿಲಿಂಡರ್‌ಗೆ 837.50 ರೂ. ಹಾಗೆಯೇ ದೆಹಲಿ ಮತ್ತು ಮುಂಬೈನ ಜನರು 14.2 ಕೆಜಿ ಸಿಲಿಂಡರ್‌ಗೆ 834.50 ರೂ ತೆರುತ್ತಿದ್ದಾರೆ. ಇನ್ನು ಕೋಲ್ಕತ್ತಾದ ನಾಗರಿಕರು ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್‌ಗೆ 861 ರೂ. ಹಾಗೂ ಚೆನ್ನೈನಲ್ಲಿ 850.50 ರೂ.ಗಳನ್ನು ತೆರಬೇಕಾಗಿದೆ.

ಇನ್ನು, 19 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 76 ರೂ.ಗೆ ಹೆಚ್ಚಿಸಲಾಗಿದೆ. ಈ ಹೆಚ್ಚಳದಿಂದ ದೆಹಲಿ ನಿವಾಸಿಗಳು ಈಗ 19 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್‌ಗೆ 1,550 ರೂ. ಪಾವತಿಸಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು