CrimeNEWSನಮ್ಮಜಿಲ್ಲೆ

ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕೋಡಿ: ಅಪಘಾತ ಎಸಗಿ ಅಡ್ಡಾದಿಡ್ಡಿ ಲಾರಿ ಓಡಿಸಿಕೊಂಡು ಹೋಗುತ್ತಿದ್ದಾನೆ ಎಂದು ಸಿಟ್ಟುಗೊಂಡ ಐವರು ಲಾರಿ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ‌ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ.

ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ (23) ಹತ್ಯೆಯಾದ ಲಾರಿ ಚಾಲಕ. ಸಂಕೇಶ್ವರದಿಂದ ಬೆಳಗಾವಿ ಕಡೆಗೆ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ಅಜೀಮ್ ಚಾಲನೆ ವೇಳೆ ಬೈಕ್, ಕ್ಯಾಂಟರ್‌ಗೆ ಗುದ್ದಿ ಗಾಬರಿಯಿಂದ ಹೊರಟಿದ್ದ. ಈ ವೇಳೆ ಪರಸಪ್ಪಗೆ ಸೇರಿದ ಬೈಕ್, ಹಣಮಂತ ಇಡ್ಲಿಗೆ ಸೇರಿದ ಕ್ಯಾಂಟರ್‌ಗೆ ಗುದ್ದಿದ್ದ.

ಎರಡು ಕಡೆ ಅಪಘಾತ ಎಸಗಿದರೂ ಲಾರಿ ನಿಲ್ಲಿಸದೇ ಪರಾರಿಯಾಗಲು ಅಜೀಂ ಯತ್ನಿಸಿದ್ದ. ಈ ವೇಳೆ ಬೆನ್ನತ್ತಿ ಕಾಟಬಳಿ ಗ್ರಾಮದ ಹತ್ತಿರ ಲಾರಿಗೆ ಕಲ್ಲೆಸೆದು ಪರಸಪ್ಪ ಹಾಗೂ ಹಣಮಂತ ತಡೆದಿದ್ದರು.

ಈ ವೇಳೆ ಪರಸಪ್ಪ ತನ್ನ ಐವರು ಸ್ನೇಹಿತರ ಜತೆಗೂಡಿ ಅಜೀಂ ಜತೆಗೆ ವಾಗ್ವಾದ ನಡೆಸಿದ್ದ. ಇದು ವಿಕೋಪಕ್ಕೆ ತಿರುಗಿ ಅಜೀಂ ಮರ್ಮಾಂಗಕ್ಕೆ ಒದ್ದು, ಐವರು ಬಡಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಪರಸಪ್ಪ, ಹಣಮಂತಗೆ ಹಾಳಪ್ಪ ಹಳ್ಯಾಗೋಳ, ಈರಪ್ಪ ನಾಯಿಕ್, ಅಮಿತ್ ಶಿಂಧೆ ಸಾಥ್ ನೀಡಿದ್ದರು‌. ತೀವ್ರ ಅಸ್ವಸ್ಥಗೊಂಡಿದ್ದ ಅಜೀಂಗೆ ಬೆಳಗಾವಿಯ ಬೀಮ್ಸ್‌‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅಜೀಂ ಇಪ್ಪೇರಿ ಮೃತಪಟ್ಟಿದ್ದಾರೆ.

ಲಾರಿ ಚಾಲಕನ ಹತ್ಯೆಗೆ ಕಾರಣರಾದ ಐವರೂ ಆರೋಪಿಗಳನ್ನು ಯಮಕನಮರಡಿ ಪೊಲೀಸರು ಬಂಧಿಸಿ ಬೆಳಗಾವಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ