CrimeNEWSದೇಶ-ವಿದೇಶ

ಅದಾನಿ ಅವ್ಯವಹಾರ ಪ್ರಸ್ತಾಪಿಸಿದ್ದಕ್ಕೆ ಸಂಜಯ್‌ ಸಿಂಗ್‌ ವಿರುದ್ಧ ಕೇಂದ್ರದಿಂದ ಸೇಡಿನ ರಾಜಕಾರಣ: ಎಎಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಸಭೆಯಲ್ಲಿ ಅದಾನಿ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ಕಾರಣಕ್ಕೆ ಸಂಸದ ಸಂಜಯ್‌ ಸಿಂಗ್‌ ಅವರ ವಿರುದ್ಧ ಷಡ್ಯಂತ್ರದಿಂದ ಸಾಕ್ಷ್ಯಾಧಾರಗಳಿಲ್ಲದ ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿರುವುದು ನಾಚಿಕೆಗೇಡಿನ ವಿಚಾರ. ಇದೊಂದು ಹೇಡಿತನದ ಕೃತ್ಯ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಕಿಡಿಕಾರಿದರು.

ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ನಗರದಲ್ಲಿ ಗುರುವಾರ ಮೊಂಬತ್ತಿ ಹಿಡಿದು ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತಮ್ಮ ವಿರುದ್ಧ ಧ್ವನಿ ಎತ್ತಿದವರನ್ನು ಹತ್ತಿಕುವ ಪ್ರಯತ್ನ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಇದಕ್ಕಾಗಿ ಸಂವಿಧಾನ ವಿರೋಧಿ ಕೃತ್ಯಗಳನ್ನು ನಡೆಸುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ಹಗರಣಕ್ಕೆ ಸಂಬಂಧಿಸಿ ಇದುವರೆಗೆ ಒಂದು ರೂಪಾಯಿ ಭ್ರಷ್ಟಾಚಾರದ ದುಡ್ಡನ್ನು ವಶಪಡಿಸಿಕೊಂಡಿಲ್ಲ. ಭ್ರಷ್ಟಾಚಾರವೇ ನಡೆಯದ ಮೇಲೆ ಅಕ್ರಮ ಹಣವನ್ನು ಅಧಿಕಾರಿಗಳಿಗೆ ವಶ ಪಡಿಸಿಕೊಳ್ಳಲು ಹೇಗೆ ತಾನೆ ಸಾಧ್ಯವಾಗುತ್ತದೆ ಎಂದು ಡಾ. ಸತೀಶ್ ಪ್ರಶ್ನಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜಕಾರಣ ಮಾಡಬೇಕೇ ವಿನಃ ಅಧಿಕಾರದ ದರ್ಪದಲ್ಲಿ ತನ್ನ ಅದೀನದಲ್ಲಿ ಬರುವ ಕೇಂದ್ರ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಖಂಡನಾರ್ಹ. ತಕ್ಷಣ ಸಂಜಯ್‌ ಸಿಂಗ್‌ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ಮುಖಂಡ ವಿಜಯ್ ಶರ್ಮಾ, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ಚಂದನ್ ಶೆಟ್ಟಿ ಜ್ಯೋತಿಶ್ ಕುಮಾರ್, ಶಿವಕುಮಾರ್ ,ಅನಿಲ್ ನಾಚಪ್ಪ , ಮಂಜುರಾವ್ ಪಾಪಣ್ಣ, ಸಿದ್ದು ,ಉಪಾಧ್ಯಾಯ ಇರ್ಷಾದ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು