ಅಧಿಕೃತವಾಗಿ ರಸ್ತೆಗಿಳಿದ KSRTC ನಮ್ಮ ಕಾರ್ಗೋ ಟ್ರಕ್‌ಗಳು : ವರ್ಷದೊಳಗೆ 500 ಟ್ರಕ್‌ಗಳ ಸೇರ್ಪಡೆ ಎಂದ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಪ್ರಾರಂಭ ಮಾಡಿರುವ ನಮ್ಮ ಕಾರ್ಗೋ- “ಟ್ರಕ್ ಸೇವೆ“ ಯೋಜನೆಗೆ ಶನಿವಾರ ಚಾಲನೆ ನೀಡುವ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 20 ನೂತನ ಟ್ರಕ್‌ಗಳಿಗೆ ಹಸಿರು ನಿಶಾನೆ ತೋರಿಸಿ ಅಧಿಕೃತವಾಗಿ ರಸ್ತೆಗಿಳಿಸಿದ್ದಾರೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಈ ವೇಳೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್‌ಗಳನ್ನು, ಒಂದು ವರ್ಷದೊಳಗಾಗಿ 500 ಟ್ರಕ್‌ಗಳನ್ನು ಸೇರ್ಪಡೆ ಮಾಡಲಾಗುವುದು ಮತ್ತು ಪ್ರಸಕ್ತ ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮ‌ಕಾರ್ಗೋ ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಇದನ್ನು ಕಾರ್ಯಾಚರಣೆ ಹಾಗೂ ನಿರ್ವಹಣೆಗಾಗಿ ಘಟಕವನ್ನಾಗಿ ಬಳಸಿ ಬಸ್ ನಿಲ್ದಾಣದಲ್ಲಿರುವ ಸ್ಥಳವನ್ನು ಸರ್ಕಾರಿ ಸಂಸ್ಥೆಗಳಿಗೆ ನೀಡಿ ವಾಣಿಜ್ಯ ಉಪಯೋಗಕ್ಕಾಗಿ ಬಳಸಲು ಉದ್ದೇಶಿಸಲಾಗಿದೆ ಎಂದ ಅವರು, ಟ್ರಕ್ ಸೇವೆಯು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆಯಿಂದ ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಿಗೆ ಲಭ್ಯವಿರಲಿದೆ ಎಂದು ಹೇಳಿದರು.

ಕೆಎಸ್‌ಆರ್‌ಟಿಸಿ 2021 ರಲ್ಲಿಯೇ ಸರಕುಗಳನ್ನು ಸಾಗಿಸಲು ಬಸ್‌ಗಳನ್ನು ಬಳಸಲು ಪ್ರಾರಂಭಿಸಿತು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಬಳಸಲು ಪ್ರಾರಂಭಿಸಿದೆ. ಈ ಆರು ಚಕ್ರಗಳ ಟ್ರಕ್​​ನಲ್ಲಿ 6 ಟನ್ ಸರಕುಗಳನ್ನು ಸಾಗಿಸಬಹುದಾಗಿದೆ ಎಂದು ತಿಳಿಸಿದರು.

ನಿಗಮವು ಗ್ರಾಹಕರ ಅಗತ್ಯತೆಗನುಗುಣವಾಗಿ ಟ್ರಕ್ ಸೇವೆ ಒದಗಿಸಲಿದ್ದು, ಆಸಕ್ತ ಗ್ರಾಹಕರು ತಮ್ಮ ಅಗತ್ಯತೆಗಳ ಮಾಹಿತಿ / ವಿವರಗಳನ್ನು ಒದಗಿಸುವಂತೆ ಕೋರಿದರು. ಹೆಚ್ಚಿನ ಮಾಹಿತಿಗಾಗಿ : ಕಾಲ್ ಸೆಂಟರ್ ಸಂಖ್ಯೆ – 080-26252625
ಇ-ಮೇಲ್ ವಿಳಾಸ – [email protected] ಅನ್ನು ಸಂಪರ್ಕಿಸಲು ತಿಳಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕರು (ಸಿಬ್ಬಂದಿ ಮಾತ್ತು ಜಾಗೃತೆ) ಡಾ. ನಂದಿನಿ ದೇವಿ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!