NEWSಆರೋಗ್ಯನಮ್ಮಜಿಲ್ಲೆ

ಅಂಧ ಕಲಾವಿದರಿಗೆ ಕಾರ್ಮಿಕ ಇಲಾಖೆಯಿಂದ ಅಗತ್ಯ ವಸ್ತುಗಳ ವಿತರಣೆ  

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ತಾಲೂಕಿನ ಹೆಗ್ಗೆರೆ ಗ್ರಾಮದ ಭೈರವೇಶ್ವರ ಕಾಲೇಜಿನ ಬಳಿ ವಾಸವಿರುವ ಅಂಧ ಕಲಾವಿದರಿಗೆ ಇಂದು ಬೆಳಗ್ಗೆ ಕಾರ್ಮಿಕ ಇಲಾಖೆಯಿಂದ 25 ಕೆ.ಜಿ. ಅಕ್ಕಿ, ಸಕ್ಕರೆ, ಸೋಪು ಹಾಗೂ ಮತ್ತಿತರ ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು.

ಸೋಂಕು ಹರಡದಂತೆ ಜಾರಿಯಲ್ಲಿರುವ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರಕ್ಕೆ ತೊಂದರೆಯಾಗಬಾರದೆನ್ನುವ ದೃಷ್ಟಿಯಿಂದ ಈ ಅಂಧ ಕಲಾವಿದರ ತಂಡಕ್ಕೆ  ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು. ಕಾರ್ಮಿಕ ಅಧಿಕಾರಿ ಸುಭಾಷ್ ಎಂ. ಆಲದಕಟ್ಟೆ, ಕಂದಾಯ ನಿರೀಕ್ಷಕರು ಮತ್ತಿತರರಿದ್ದರು.

ಕೊರೊನಾ ಯೋಧರಿಂದ ಆಹಾರ ಪೂರೈಕೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಹಾಗೂ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ರಚಿಸಲಾಗಿರುವ ಕೊರೊನಾ ಯೋಧರು (ಕೊರೊನಾ ವಾರಿಯರ್ಸ್) ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಹೆಗ್ಗೆರೆಯ ಈ 5 ಮಂದಿ ಅಂಧ ಕಲಾವಿದರಾದ ವಿಜಯ್‌ಕುಮಾರ್, ಸುರೇಶ್, ಮಂಜುಳ, ಶಿವಮ್ಮ, ಶೈಲಜ ಅವರಿಗೆ   ಆಹಾರ ಪೂರೈಕೆ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ನಂದನ್‌ಕುಮಾರ್, ಹೇಮಂತ್‌ಕುಮಾರ್, ಕುಮಾರಸ್ವಾಮಿ, ಗಿರೀಶ್ ಸೇರಿದಂತೆ 8 ಕೊರೊನಾ ಯೋಧರ ತಂಡವು ಬಾಳನಕಟ್ಟೆಯಲ್ಲಿರುವ ವೀರಶೈವ ಸಮಾಜದ ಕಲ್ಯಾಣ ಮಂಟಪದಲ್ಲಿ ತಯಾರಿಸಲಾಗುತ್ತಿರುವ ಆಹಾರವನ್ನು ಪ್ರತೀ ದಿನ ಅಂಧರಿಗೆ   ತಲುಪಿಸುವ ಕೆಲಸ ಮಾಡುವುದರೊಂದಿಗೆ    ಭೀಮಸಂದ್ರದಿಂದ ಮಲ್ಲಸಂದ್ರದವರೆಗೆ ಜೋಪಡಿಗಳಲ್ಲಿ ವಾಸಿಸುತ್ತಿರುವ 150 ಮಂದಿ ನಿರ್ಗತಿಕರು ಹಾಗೂ ಕಡುಬಡವರಿಗೂ ಆಹಾರ ಪೂರೈಕೆ ಮಾಡುತ್ತಿದ್ದಾರೆ.

ಹೆಗ್ಗೆರೆಯ ಅಂಧ ಕಲಾವಿದರ ತಂಡವು ಲಾಕ್‌ಡೌನ್‌ನಿಂದ ಆಹಾರ ಸಮಸ್ಯೆ ಎದುರಿಸುತ್ತಿದ್ದಾರೆಂದು   ಸಾಮಾಜಿಕ ಜಾಲತಾಣದ ಮೂಲಕ  ಮಾಹಿತಿ ತಿಳಿದ ಕೂಡಲೇ ಕಾರ್ಮಿಕ ಇಲಾಖೆ, ವಾರ್ತಾ ಇಲಾಖೆ, ಆಹಾರ ಇಲಾಖೆ ಅಧಿಕಾರಿಗಳು ಕೂಡಲೇ ಧಾವಿಸಿ ದಿನಸಿ ಪದಾರ್ಥ, ಮಾಸ್ಕ್‌ಗಳನ್ನು ವಿತರಿಸುವುದರೊಂದಿಗೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಗ್ರಾ.ಪಂ. ಅಧ್ಯಕ್ಷ ನಾಗರಾಜ್, ಸದಸ್ಯ ಭೋಜಣ್ಣ, ವಾರ್ತಾ ಇಲಾಖೆ ಆರ್. ರೂಪಕಲಾ, ಆನಂದ್, ಆಹಾರ ನಿರೀಕ್ಷಕ ಕಾಂತರಾಜಯ್ಯ, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ