NEWSಕೃಷಿನಮ್ಮರಾಜ್ಯ

ಅನ್ನದಾತರ ಶಾಪ ನಿಮಗೆ ತಟ್ಟದೆ ಬಿಡದು : ಸರ್ಕಾರಕ್ಕೆ ಮಾಜಿ ಸಿಎಂ ಎಚ್‌ಡಿಕೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ರಾಜ್ಯದಲ್ಲಿ ರೈತರ ವಿವಿಧ ಬೆಳೆಗಳು ಹಾಳಾಗಿರುವುದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಕೊಡದೆ ಮೀನಮೀಷ ಎಣಿಸುತ್ತಿದೆ. ಈ ಅನ್ನದಾತರ ಶಾಪ ಬಿಜೆಪಿ ಸರ್ಕಾರ ತಟ್ಟದೆ ಬಿಡುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ತೊಗರಿ ಬೆಳೆಗಾರರು ತೊಗರಿಗೆ ಸರಿಯಅದ ಬೆಳೆ ಬೆಲೆ ಕೊಡಬೇಕು ಎಂದು ಆಹಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟ ಬೆಂಬಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿನ ರೈತ ವರ್ಗದ ಜೊತೆಗಿನ ಬಿಜೆಪಿ ಸರ್ಕಾರದ ಚೆಲ್ಲಾಟ ಒಳ್ಳೆಯದಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ತೊಗರಿ ಬೆಳೆ ಸಂಪೂರ್ಣವಾಗಿ ನೆಟೆ ರೋಗಕ್ಕೆ ತುತ್ತಾಗಿ ಹೋಗಿದೆ. ಆದರೂ ಸರ್ಕಾರ ಜಾಣ ಕುರುಡುತನ ತೋರುತ್ತಿದೆ. ಈಗಾಗಲೇ ಕಲ್ಯಾಣವೂ ಸೇರಿದಂತೆ ಎಲ್ಲ ಕಡೆಗಳಲ್ಲಿ ತೊಗರಿ ರಾಶಿ ಮಾಡುತ್ತಿರುವ ರೈತರು ಸಂಕಷ್ಟದಲ್ಲಿದ್ದಾರೆ.

ನಿರೀಕ್ಷೆ ಮಾಡಿದ್ದಷ್ಟು ಬೆಳೆ ಬಂದಿಲ್ಲ. ಕಲಬುರಗಿ, ಯಾದಗಿರಿ ಜಿಲ್ಲೆಗಳಂತೂ ರೋಗದಿಂದ ತೊಗರಿ ಹಾಳಾಗಿ ಹೋಗಿದೆ. ಈ ಸಂದರ್ಭದಲ್ಲಿ ಅವರ ನೆರವಿಗೆ ಬರಬೇಕಾದ ಸರ್ಕಾರ ಕೇವಲ ಹೇಳಿಕೆಗಳಿಗೆ ಸೀಮಿತವಾಗಿದೆ. ಅದು ಅಲ್ಲದೆ ಬೆಳೆ ವಿಮೆ ಕೂಡ ರೈತರ ಕೈ ಸೇರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹೆಸರಿನಲ್ಲಿ ರಾಜಕೀಯ ಮಾಡಿ ಅವರಿಗೆ ಯಾವುದೇ ಅನುಕೂಲ ಮಾಡಿ ಕೊಟ್ಟಿಲ್ಲ. ಇನ್ನು 3 ತಿಂಗಳಿನಲ್ಲಿ ರಾಜ್ಯದ ಜನ ಬಿಜೆಪಿಯನ್ನು ನಿರ್ಮೂಲನ ಮಾಡ್ತಾರೆ ಎಂದು ಹರಿಹಾಯ್ದ ಅವರು, ತೊಗರಿ ಬೆಳೆಗಾರರ ಬಗ್ಗೆ ವಿಶೇಷ ಗಮನ ನೀಡಬೇಕು. ಹೀಗಾಗಿ ಬೆಳಗಾವಿ ಅಧಿವೇಶನದಲ್ಲಿ ಬಂಡೆಪ್ಪ ಕಾಶೆಂಪೂರ್ ಪ್ರಸ್ತಾಪ ಮಾಡಿದ್ರು. ಆದ್ರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಬೆಳೆ ವಿಮೆ ಹಣ ಸಿಕ್ಕಿಲ್ಲ. ಸರ್ಕಾರದಿಂದ ಪರಿಹಾರವೂ ಸಿಕ್ಕಿಲ್ಲ. ಖಾಸಗಿ ಕಂಪನಿಗಳು ರೈತರ ಹಣ ಕೊಳ್ಳೆ ಹೊಡೆದಿವೆ. ಹೀಗಾದರೆ ರೈತರ ಗತಿ ಏನು. ರೈತರ ಆದಾಯ ದ್ವಿಗುಣ ಮಾಡುವ ಮಾತುಕೊಟ್ಟಿದ್ದ ಮೋದಿ ಅವರು ಎಲ್ಲಿ. ಅವರನ್ನು ಮುಖ್ಯಮಂತ್ರಿ ಆದಿಯಾಗಿ ಯಾವ ಸ್ಥಳೀಯ ನಾಯಕರು ಕೇಳುತ್ತೀರಿ ಎಂದು ಪ್ರಶ್ನಿಸಿದರು.

ಈ ವೇಳೆಯಲ್ಲಿ ನೆಟೆರೋಗಕ್ಕೆ ತುತ್ತಾಗಿದ್ದ ತೊಗರಿ ಗಿಡಗಳನ್ನು ಹಿಡಿದೆ ರೈತರು ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ನುಗ್ಗಿದ್ದರು. ಪ್ರತಿಭಟನೆಯಲ್ಲಿ ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶಂಪೂರೆ ಸೇರಿದಂತೆ ನೂರಾರು ಕಾರ್ಯಕರ್ತರು, ರೈತ ಮುಖಂಡರು, ರೈತರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು