NEWSದೇಶ-ವಿದೇಶವಿದೇಶ

ಅಫ್ಘಾನ್‌ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕೊಡಬೇಡಿ: ಪ್ರವೀಣ್ ತೊಗಾಡಿಯಾ

ವಿಜಯಪಥ ಸಮಗ್ರ ಸುದ್ದಿ

ಮುಂಬೈ:  ಭಾರತದಲ್ಲಿ ಅಫ್ಘಾನ್‌ ಮುಸ್ಲಿಂ ಪ್ರಜೆಗಳಿಗೆಆಶ್ರಯ ಕಲ್ಪಿಸಬಾರದು ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್‍ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾಗ್ಪುರ-ವಾರ್ಧಾ ಪ್ರದೇಶದ ಮೂರು ದಿನಗಳ ಭೇಟಿಗಾಗಿ ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಭಾರತವು ತಾಲಿಬಾನ್ ಉದ್ದೇಶದ ಕೇಂದ್ರಬಿಂದುವಾಗಿರುವುದರಿಂದ ದೇಶವು ಬಹಳ ದೊಡ್ಡ ಅಪಾಯ ಎದುರಿಸುತ್ತಿದೆ. ಆದ್ದರಿಂದ ದೇಶವು ತಾಲಿಬಾನೀಕರಣ ಆಗುವುದನ್ನು ತಡೆಯಬೇಕಿದೆ ಎಂದರು.

ಇನ್ನು ಅಫ್ಘಾನಿಸ್ತಾನದ ಮುಸ್ಲಿಮರಿಗೆ ನಮ್ಮ ದೇಶದಲ್ಲಿ ಆಶ್ರಯ ಕಲ್ಪಿಸ ಬಾರದು. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ ಭಾರತವು ಗಡಿಯನ್ನು ತೆರೆದಿರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಅಘ್ಘಾನಿಸ್ತಾನದಲ್ಲಿ ನೆತ್ತರಕೋಡಿ ಹರಿಸಿದ್ದು ನಾವೇ ಎಂದು ಇಸ್ಲಾಮಿಕ್ ಸ್ಟೇಟ್ ಐಎಸ್‍ಕೆಪಿ(ISKP) ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಅಮೆರಿಕ ನೇತೃತ್ವದಲ್ಲಿ ಸೇನಾ ಪಡೆಗಳ ಹಿಂತೆಗೆತ ಕಾರ್ಯಾಚರಣೆ ವೇಳೆ ಅಘ್ಘಾನಿಸ್ತಾನದಲ್ಲಿ ಏಳು ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು.

ಬಳಿಕ ರಾತ್ರಿಯಿಡಿ ನೆತ್ತರು ಹರಿಸಿದ ಪಾಪಿಗಳು ನಾವು ಎಲ್ಲಾ ಭದ್ರತಾ ತಡೆಗೋಡೆಗಳನ್ನೂ ದಾಟಿ ಅಮೆರಿಕ ಭದ್ರತಾ ಪಡೆಗಳಿರುವ ಪ್ರದೇಶಕ್ಕಿಂತ 16 ಅಡಿ ದೂರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಕ್ಕೆ ಒಬ್ಬ ಬಾಂಬರ್‌ನಿಂದ ಸಾಧ್ಯವಾಗಿದೆ ಎಂದು ದಾಳಿಯ ಹೊಣೆ ಹೊತ್ತ ಐಎಸ್‍ಕೆಪಿ ಸಂಘಟನೆ ಪ್ರಚಾರ ಪಡೆದುಕೊಂಡಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು