CrimeNEWSದೇಶ-ವಿದೇಶ

ಅಬಕಾರಿ ನೀತಿಯಲ್ಲಿ ಅಕ್ರಮ ಆರೋಪ – ಡಿಸಿಎಂ ಸೇರಿ 15 ಮಂದಿ ವಿರುದ್ಧ FIR ದಾಖಲು, CBI ಶೋಧ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿ ಉಪ ಮುಖ್ಯಮಂತ್ರಿ ಸೇರಿದಂತೆ 15ಜನರ ವಿರುದ್ಧ ಅಬಕಾರಿ ನೀತಿಯಲ್ಲಿ ಅಕ್ರಮ ಎಸಲಾಗಿದೆ ಎಂದು ಆರೋಪಿಸಿ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ರಫ್‌ಐಆರ್‌ ದಾಖಲು ಮಾಡಿದೆ.

2021ರ ನವೆಂಬರ್‌ನಲ್ಲಿ ಹೊರಡಿಸಿದ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇರೆಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಕೇಸು ದಾಖಲಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಸಿಸೋಡಿಯಾ ಅವರ ನಿವಾಸ ಸೇರಿದಂತೆ 21 ಸ್ಥಳಗಳಲ್ಲಿ ಶೋಧ ನಡೆಸಿದೆ.

ಅದರಲ್ಲಿ ಎಎಪಿ ನಾಯಕರ ಮನೆ, ಐಎಎಸ್ ಅಧಿಕಾರಿ ಮತ್ತು ಮಾಜಿ ಅಬಕಾರಿ ಆಯುಕ್ತ ಅರವ್ ಗೋಪಿ ಕೃಷ್ಣ ಅವರ ನಿವಾಸ ಮತ್ತು ಇತರ 19 ಸ್ಥಳಗಳಲ್ಲೂ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಇನ್ನಿಬ್ಬರು ಅಧಿಕಾರಿಗಳ ಮನೆಗಳನ್ನೂ ಶೋಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಿಬಿಐ ಅಧಿಕಾರಿಗಳು ಸಿಸೋಡಿಯಾ ಅವರ ನಿವಾಸವನ್ನು ತಲುಪುತ್ತಿದ್ದಂತೆ, ಸಿಬಿಐಗೆ ಸ್ವಾಗತ. ಆದರೆ ಪಿತೂರಿಗಳು ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ ಮತ್ತು ಉತ್ತಮ ಶಿಕ್ಷಣವನ್ನು ನೀಡುವ ಕೆಲಸದಲ್ಲಿ ಮುಂದುವರಿಯುವ ನಮ್ಮ ಸಂಕಲ್ಪವನ್ನು ತಡೆಯುವುದಿಲ್ಲ ಎಂದು ದೆಹಲಿ ಡಿಸಿಎಂ ಟ್ವೀಟ್ ಮಾಡಿ ಹೇಳಿದ್ದಾರೆ.

ಮತ್ತೊಂದೆಡೆ, ಬಿಜೆಪಿ ಸಹ ದೆಹಲಿ ಉಪಮುಖ್ಯಮಂತ್ರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅಬಕಾರಿ ಖಾತೆಯನ್ನು ಹೊಂದಿರುವ ಸಿಸೋಡಿಯಾ ಅವರು “ಎಕ್ಸ್ಯೂಸ್ ಮಂತ್ರಿ” ಆಗಿದ್ದಾರೆ. “ಮದ್ಯ ಪರವಾನಗಿ ಮತ್ತು ಅದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ಕೇಜ್ರಿವಾಲ್ ಸರ್ಕಾರ ನೂರಾರು ಕೋಟಿ ರೂಪಾಯಿಗಳ ಮದ್ಯದ ಹಗರಣದಲ್ಲಿ ಭಾಗಿಯಾಗಿದೆ ಎಂದು ದೆಹಲಿ ಬಿಜೆಪಿ ಆರೋಪಿಸಿದೆ. ಆದರೆ ಕರ್ನಾಟಕದಲ್ಲಿ ಇದೇ ಬಿಜೆಪಿ 40% ಕಮಿಷನ್‌ ದಂದೆ ನಡೆಸುತ್ತಿದೆ ಎಂಬ ಆರೋಪ ಕೇಳಿ ಬಂದರೂ ಈವರೆಗೂ ಯಾವುದೇ ಸಚಿವರ ಮನೆಗಳ ಮೇಲೆ ದಾಳಿಯಾಗದಿರುವುದು ದುರಂತ ಎಂದು ಎಎಪಿ ರಾಜ್ಯ ನಾಯಕರು ಕಿಡಿಕಾರಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ