NEWSನಮ್ಮಜಿಲ್ಲೆ

ಅಬಕಾರಿ ಸನ್ನದ್ದು ಬಾರ್, ರೆಸ್ಟೋರೆಂಟ್ ಗ‌ಳ ವಿರುದ್ಧ FIR 

577 ದಾಳಿಗಳನ್ನು ನಡೆಸಿ, 44 ಅಬಕಾರಿ ಮೊಕದ್ದಮೆ ದಾಖಲು l 29 ಮಂದಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಮಾ. 24 ರಿಂದ  ಏ.14 ರವರೆಗೆ ಮದ್ಯದ ದಾಸ್ತಾನು ಮಾರಾಟ ನಿಷೇಧ ಮಾಡಿ ಮದ್ಯದಂಗಡಿ ಮುಚ್ಚಲಾಗಿತ್ತು. ಆದರೂ ಅಕ್ರಮವಾಗಿ ತೆರೆದಿದ್ದ ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ .

ಜಿಲ್ಲೆಯ ತುಮಕೂರು ತಾಲೂಕು ಮಲ್ಲಸಂದ್ರದಲ್ಲಿರುವ ಗಣೇಶ್ ಬಾರ್ ಅಂಡ್ ರೆಸ್ಟೋರೆಂಟ್, ಚಿಕ್ಕನಾಯಕನಹಳ್ಳಿ ತಾಲೂಕು ತಿಮ್ಮನಹಳ್ಳಿಯಲ್ಲಿರುವ ಹನುಮನ್ ವೈನ್ಸ್, ಕುಣಿಗಲ್ ತಾಲೂಕು ಉಜನಿ ಗ್ರಾಮದಲ್ಲಿರುವ ವೆಂಕಟೇಶ್ವರ ಬಾರ್ ಅಂಡ್ ರೆಸ್ಟೋರೆಂಟ್ ಸನ್ನದ್ದುಗಳ ಮಾಲೀಕರು ಸನ್ನದ್ದು ಷರತ್ತು ಉಲ್ಲಂಘಿಸಿ ದುರುಪಯೋಗ ಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್  ಈ ಸನ್ನದ್ದುಗಳನ್ನು ಅಮಾನತು ಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಟ ಕಳ್ಳಬಟ್ಟಿ, ನಕಲಿ ಮದ್ಯ, ಸೇಂದಿ ಮುಂತಾದ ಅಬಕಾರಿ ಅಕ್ರಮಗಳ ನಡೆಯದಂತೆ ಕಟ್ಟೇಚ್ಚರವಹಿಸಿದ್ದು, ವಲಯಮಟ್ಟದಲ್ಲಿ ಹಗಲು ಮತ್ತು ರಾತ್ರಿ ಪಾಳಿ ಗಸ್ತು ತಂಡಗಳನ್ನು ರಚಿಸಿ, ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಯ ಸತತ ಕಾರ್ಯಚಾರಣೆ ಮೂಲಕ 577 ದಾಳಿಗಳನ್ನು ನಡೆಸಿ, 44 ಅಬಕಾರಿ ಮೊಕದ್ದಮೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. 29 ಆರೋಪಿಗಳನ್ನು ಬಂಧಿಸಿ, 2344 ಲೀಟರ್ ಮದ್ಯ, 391 ಲೀ. ಬಿಯರ್, 1 ಕಾರು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ 3 ಮೆಥನಾಲ್ ಘಟಕಗಳಿದ್ದು, ಈ ಘಟಕಗಳ ಮೇಲೆ ತೀವ್ರ ನಿಗಾವಣೆ ವಹಿಸಲಾಗಿದೆ. ಮದ್ಯ ವ್ಯಸನಿಗಳು ಮೆಥನಾಲ್ ಸೇವಿಸಿ ಅಪಾರ ಸಾವು-ನೋವು ಸಂಭವಿಸುವ ಹಿನ್ನೆಲೆಯಲ್ಲಿ ಈ ಘಟಕಗಳಿಗೆ ಗಸ್ತಿನಲ್ಲಿರುವ ತಂಡ ಭೇಟಿ ನೀಡಿ, ಪರಿಶೀಲಿಸಿ, ದುರ್ಬಳಕೆ ಮಾಡದಂತೆ ಕಟ್ಟೇಚ್ಚರವಹಿಸಲಾಗಿದೆ. ಅಲ್ಲದೇ ಜಿಲ್ಲೆಯ ಹೆದ್ದಾರಿಗಳ ಮೂಲಕ ಹಾದು ಹೋಗುವ ಮೆಥನಾಲ್ ತುಂಬಿದ ಟ್ಯಾಂಕರ್ಗಳನ್ನು ಜಿಲ್ಲೆಯ ಹಿರಿಯೂರು ಮತ್ತು ಶಿರಾ ಸರಹದ್ದಿನಿಂದ ತುಮಕೂರು ನೆಲಮಂಗಲ ಸರಹದ್ದಿನವರೆಗೆ ಗಸ್ತಿನಲ್ಲಿರುವ ಅಬಕಾರಿ ತಂಡಗಳು ಎಸ್ಕಾರ್ಟ್ ಮೂಲಕ ಜಿಲ್ಲೆಯ ಸರಹದ್ದು ದಾಟಿಸುವ ಕೆಲಸ ಮಾಡುತ್ತಿವೆ.

ಕೋವಿಡ್-19 ಹರಡದಂತೆ ತಡೆಗಟ್ಟುವ ಸಲುವಾಗಿ ಅಬಕಾರಿ ಇಲಾಖೆ ವತಿಯಿಂದ ಹ್ಯಾಂಡ್/ಸ್ಯಾನಿಟೈಜರ್ಗಳನ್ನು ಜಿಲ್ಲೆಯ ಡಿಸ್ಟಿಲರಿಗಳಲ್ಲಿ ಉತ್ಪಾದಿಸಿ, 800 ಲೀಟರ್ ತುಮಕೂರು ಜಿಲ್ಲಾಡಳಿತಕ್ಕೆ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ತಲಾ 500 ಲೀಟರ್ ಹಾಗೂ ಶಿವಮೊಗ್ಗ ಜಿಲ್ಲಾಡಳಿತಕ್ಕೆ 300 ಲೀಟರ್ ಸ್ಯಾನಿಟೈಜರ್ಗಳನ್ನು ಪೂರೈಸಲಾಗಿದೆ.

ಜಿಲ್ಲಾ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದ್ದು, ದೂರವಾಣಿ ಸಂಖ್ಯೆ: 0816-2272922 ಸ್ಥಾಪಿಸಿದ್ದು, ದೂರು ಬಂದ ತಕ್ಷಣ ಅಬಕಾರಿ ತಂಡ ಕಾರ್ಯ ಪ್ರವೃತ್ತರಾಗಿ ದಾಳಿ ನಡೆಸಿ ಅಕ್ರಮಗಳನ್ನು ತಡೆಗಟ್ಟಲಾಗುತ್ತಿದೆ. ಸಾರ್ವಜನಿಕರು ಅಬಕಾರಿ ಅಕ್ರಮಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಕೊಠಡಿಯ ದೂರವಾಣಿಗೆ ಸಂಪರ್ಕಿಸಿ ತಕ್ಷಣ ತಿಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ನಾಗರಾಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...