NEWSನಮ್ಮಜಿಲ್ಲೆ

ಅವಳಿ  ನಗರದಲ್ಲಿ 7 ಫೀವರ್ ಕ್ಲಿನಿಕ್ ಗಳು

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್-19 ಕೊರೊನಾ ರೋಗವು ಮುಖ್ಯವಾಗಿ ಜ್ವರ, ಕೆಮ್ಮು , ಉಸಿರಾಟದ ತೊಂದರೆ, ಅತಿಸಾರ, ಭೇದಿ ಮುಖಾಂತರ ಕಾಣಿಸಿಕೊಳ್ಳುತ್ತಿದೆ.  ಮುಂಜಾಗೃತ ಕ್ರಮವಾಗಿ ಜ್ವರ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚುವ ಅವಶ್ಯಕತೆಯನ್ನು ಮನಗಂಡಿರುವ ಸರ್ಕಾರ,  ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಸ್ಥಾಪಿಸಿರುವ ಫೀವರ್ ಕ್ಲಿನಿಕ್‍ಗಳ ಕಾರ್ಯವನ್ನು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪರಿಶೀಲಿಸಿದರು.

ಧಾರವಾಡದ ತೇಜಸ್ವಿ ನಗರದ ಪುರೋಹಿತ ನಗರದಲ್ಲಿನ  ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಭೇಟಿ ನೀಡಿದ ಸಚಿವರು,  “ಫೀವರ್ ಕ್ಲಿನಿಕ್” ಗಳ ಕಾರ್ಯವಿಧಾನ ಪರಿಶೀಲಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, “ಫೀವರ್ ಕ್ಲಿನಿಕ್ ” ಗಳನ್ನಾಗಿ ಮಾರ್ಪಡಿಸಿದ ನಗರ ಆರೋಗ್ಯ ಕೇಂದ್ರಗಳಲ್ಲಿ ನೋವಲ್ ಕೊರೊನಾ ಸೋಂಕು ಲಕ್ಷಣ ಇರುವ ಸಾರ್ವಜನಿಕರಿಗೆ ಪ್ರತ್ಯೇಕವಾಗಿ  ಆರೋಗ್ಯ  ಸೇವೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಮಾನವ ಸಂಪನ್ಮೂಲದಿಂದ ಫೀವರ್ ಕ್ಲಿನಿಕ್‍ಗಳನ್ನು ನಡೆಸಲಾಗುತ್ತದೆ. ಫೀವರ್ ಕ್ಲಿನಿಕ್‍ಗೆ ಅವಶ್ಯಕವಾದ ಆರೋಗ್ಯ ಸಲಕರಣೆ ಮತ್ತು ಸಾಮಗ್ರಿಗಳಾದ ಥರ್ಮಲ್ ಸ್ಕ್ಯಾನರ್ , ಎನ್ – 95 ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ಮತ್ತು ಸುರಕ್ಷಾ ಕವಚಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಅನುದಾನದಲ್ಲಿ ಭರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಮದೀನಕರ್ ಮಾತನಾಡಿ, ಧಾರವಾಡದ ಜಿಲ್ಲಾ ಆಸ್ಪತ್ರೆ, ಮದಾರಮಡ್ಡಿ, ಬಾರಾಕೋಟ್ರಿ, ಪುರೋಹಿತ ನಗರ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ 2, ಹಾಗೂ ಚಿಟಗುಪ್ಪಿ ಸಾರ್ವಜನಿಕ ಆಸ್ಪತ್ರೆ ಸೇರಿ ಒಟ್ಟು 07 ಕಡೆಗಳಲ್ಲಿ ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗಿದೆ. ಫೀವರ್ ಕ್ಲಿನಿಕ್‍ಗಳ ನಿರ್ದಿಷ್ಟ ಮಾರ್ಗಸೂಚಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ನೀಡಿದ್ದಾರೆ ಎಂದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಎಸ್.ಎಂ. ಹೊನಕೇರಿ ಮಾತನಾಡಿ, ಫೀವರ್ ಕ್ಲಿನಿಕ್ ಗಳಲ್ಲಿ ಉಪಯೋಗಿಸಿದ ಮಾಸ್ಕ್ , ಗ್ಲೌಸ್ ಹಾಗೂ ಇತರೆ ವಸ್ತುಗಳನ್ನು ಎಚ್ಚರಿಕೆಯಿಂದ ಜೈವಿಕ ವೈದ್ಯಕೀಯ ತಾಜ್ಯ ನಿರ್ವಹಣೆ ಕಾಯ್ದೆ ಅನ್ವಯ ವಿಲೇವಾರಿ ಮಾಡಲಾಗುವುದು. ಆಪ್ತ ಸಮಾಲೋಚನೆ ಮತ್ತು ಐ.ಇ.ಸಿ ಚಟುವಟಿಕೆಗಳನ್ನು ನಡೆಸಲಾಗುವುದು. ಖಾಸಗಿ ಕ್ಲಿನಿಕ್ / ಆಸ್ಪತ್ರೆಗಳು “ಫೀವರ್ ಕ್ಲಿನಿಕ್” ಗಳಾಗಿ ಕಾರ್ಯನಿರ್ವಹಿಸಲು ಇಚ್ಛಿಸಿದಲ್ಲಿ ಹೆಸರು ನೊಂದಾಯಿಸಿಕೊಂಡು ಅವರಿಗೆ ಅವಶ್ಯ ತರಬೇತಿ ನೀಡಿ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರಿಗೆ ಮಾಹಿತಿ ನೀಡಿದರು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಪರಶುರಾಮ ಎಫ್.ಕೆ. ಸೇರಿದಂತೆ ಶುಶ್ರೂಷಕಿಯರು, ಸಹಾಯಕ ಸಿಬ್ಬಂದಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...