CrimeNEWSನಮ್ಮಜಿಲ್ಲೆ

ಆಗಿರುವುದು ರೇಪ್ ಕೇಸ್ ದಾಖಲಿಸಿರುವುದು ಕಿರುಕುಳ ಪ್ರಕರಣ: ಉಗ್ರಪ್ಪ  ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅತ್ಯಾಚಾರ ನಡೆದ್ರೂ ಐಪಿಸಿ ಸೆಕ್ಷನ್ 376ರ ಅಡಿ ಯಾಕೆ ಕೇಸ್ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ. ರಾಜ್ಯದ ಗೃಹಮಂತ್ರಿಗಳು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ನಡೆಸಿದ ಉದ್ದಿಗೋಷ್ಠಿಯಲ್ಲಿ ಮಾತನಾಡಿದ ವಿ.ಎಸ್ ಉಗ್ರಪ್ಪ, ತಿಂಗಳಲ್ಲಿ ಮೈಸೂರಿನಲ್ಲಿ ಒಂದು ಶೂಟೌಟ್ ಆಗಿದೆ. ಮೂರು ಮರ್ಡರ್ ಗಳಾಗಿವೆ, ಮೂರು ದರೋಡೆ, 16 ಕಳ್ಳತನಗಳಾಗಿವೆ.

ಸರಸ್ವತಿಪುರಂನಲ್ಲಿ ಇವತ್ತು ಬಾಲಕಿ ಅತ್ಯಾಚಾರ ಕೇಸ್ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅತ್ಯಾಚಾರ ನಡೆದ್ರೂ 376ರ ಅಡಿ ಕೇಸ್ ಯಾಕೆ ಹಾಕಲಿಲ್ಲ ಎಂದು ಪ್ರಶ್ನಿಸಿದರು.

ಹಿಂದೆ ವಿಬ್ ಗಯಾರ್ ಶಾಲೆಯಲ್ಲಿ ಪ್ರಕರಣ ಆಗಿತ್ತು. ಆಗ ನೀವು ಏನಂತ ಬಾಯಿ ಬಡಿದುಕೊಳ್ತಿದ್ರಿ. ಈಗ ಮೈಸೂರಿನ ಹೊಣೆ ಯಾರು ಹೊರಬೇಕು ಎಂದು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ನಡೆದಿರುವ ಕೃತ್ಯ ಅಮಾನವೀಯವಾದುದು. ದೆಹಲಿಯ ನಿರ್ಭಯಾ ಕೇಸ್ ರೀತಿಯಲ್ಲಿ, ತೆಲಂಗಾಣದ ರೆಡ್ಡಿ ಕೇಸ್ ರೀತಿಯಲ್ಲಿ ಹೀನ ಕೃತ್ಯವಿದು.

ಇನ್ನು ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ರಿಂಗ್ ರಸ್ತೆಯಲ್ಲಿ ಲಲಿತಾದ್ರಿ ಪಾರ್ಕ್ ಇದೆ. ಆ ಪಾರ್ಕ್‍ನಲ್ಲಿ ಯುವತಿ ಮತ್ತು ಅಕೆಯ ಸ್ನೇಹಿತ ಮಾತನಾಡುತ್ತಿರುತ್ತಾರೆ. ಅಲ್ಲಿಂದ ಯುವತಿ ಎಳೆದೋಯ್ದು ಕೃತ್ಯವೆಸಗಿದ್ದಾರೆ.

ಸಂಜೆ 7:30 ರಿಂದ 10:30 ರವರೆಗೆ ನಡೆದಿದೆ. ನಂತರ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಣ್ಣುಮಗಳ ದೇಹದ ಮೇಲೆ ಗಂಭೀರ ಗುರುತುಗಳಿವೆ, ಗಾಯಗಳಾಗಿವೆ. ಪೈಶಾಚಿಕವಾಗಿ ಕೃತ್ಯವೆಸಗಿದ್ದಾರೆ.

ಘಟನೆ ನಡೆದು 24 ಗಂಟೆಯಾದರೂ ಕೇಸ್ ದಾಖಲಾಗಿರಲಿಲ್ಲ ನಂತರ ಆಲನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗುತ್ತದೆ. ಮೋದಿ ನಿರ್ಭಯ ಕೇಸ್ ವೇಳೆ ಏನು ಮಾಡಿದ್ರಿ? ನಂದಿತಾ ಸಾವು ಗೃಹ ಸಚಿವರ ಕ್ಷೇತ್ರದಲ್ಲಿ ನಡೆದಿತ್ತು ಆಗ ನೀವು ಏನು ಮಾಡಿದ್ದಿರಿ ಇದರ ಬಗ್ಗೆ ನೀವು ಉತ್ತರಿಸಿ ಎಂದು ಕಿಡಿಕಾರಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು