NEWSನಮ್ಮಜಿಲ್ಲೆನಮ್ಮರಾಜ್ಯ

ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗುಡ್​ನ್ಯೂಸ್​ ನೀಡಿದ್ದು, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿಗೆ ನಿರ್ಣಯ ಕೈಗೊಂಡಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಸೋಮವಾರ, ಜುಲೈ 15ರ ಸಂಜೆ ಸಿಎಂ ನೇತೃತ್ವದಲ್ಲಿ ನಡೆದ ಮೂರನೇ ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಆಗಸ್ಟ್‌ 1 ರಿಂದ 7 ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಮತ್ತು ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ.

ಈ ಬಗ್ಗೆ ಸಿಎಂ ಕಚೇರಿಯಿಂದ ಮಾಹಿತಿ ಬಂದಿದ್ದು, “2024 ಆಗಸ್ಟ್ 1 ರಿಂದ 7 ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಶೇ 10.5 ವೇತನ ಪರಿಷ್ಕರಣೆ:‌ ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲಿ ಶೇ.17ರ ಮಧ್ಯಂತರ ಪರಿಹಾರ ನೀಡಲಾಗಿದ್ದು, ಅಂತಿಮವಾಗಿ ಶೇ 10.5 ವೇತನ ಪರಿಷ್ಕರಣೆಯಾಗಲಿದೆ.

ಒತ್ತಡಕ್ಕೆ ಮಣಿದ ಸರ್ಕಾರ: ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿಗೆ ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಇತ್ತು. ಹೀಗಾಗಿ ಮೊದಲ ದಿನದ ಅಧಿವೇಶನದ ಬಳಿಕ ಸೋಮವಾರ ಸಂಜೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು, ಇದಕ್ಕೆ ಎಲ್ಲ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಹು ವರ್ಷಗಳಿಂದ ಮುಂದೂಡುತ್ತಾ ಬಂದಿತ್ತು!: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದದೆ. ಹೀಗಾಗಿ ಸಂಪನ್ಮೂಲ ಕೊರತೆ ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆಯಂತೆ 7ನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಯನ್ನು ಮುಂದೂಡುತ್ತಾ ಬಂದಿತ್ತು.

ಮುಷ್ಕರ ಎಚ್ಚರಿಕೆಗೆ ಬೆಚ್ಚಿದ ಸರ್ಕಾರ?:  ಆದರೆ, 7 ನೇ ವೇತನ ಆಯೋಗ ಶಿಫಾರಸುಗಳನ್ನು ಬೇಡಿಕೆಗಾಗಿ ಜುಲೈ ಅಂತ್ಯದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ನೌಕರರ ಸಂಘಟನೆಗಳು ನೀಡಿದ್ದವು. ಇದರಿಂದ ಭಯಗೊಂಡ ಸರ್ಕಾರ ಜಾರಿಗೆ ದಿನಾಂಕ ಘೋಷಣೆ ಮಾಡಿದೆ.

ಪ್ರಮುಖ ಶಿಫಾರಸುಗಳೇನು?: 7 ನೇ ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 7500 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುವ ನಿರೀಕ್ಷೆಯಿದೆ. ಹೀಗಾಗಿ ಈಗಾಗಲೇ ಗ್ಯಾರಂಟಿಗಳಿಗೆ ವಾರ್ಷಿಕ ಹೆಚ್ಚುವರಿ 52,000 ಕೋಟಿಯಿಂದ 58,000 ಕೋಟಿ ರೂ. ಹೊರೆ ಕಾರಣಕ್ಕೆ ಸದ್ಯ ಆದಾಯ, ವೆಚ್ಚ ಸರಿದೂಗಿಸುವುದು ಕಷ್ಟವಾಗಿದೆ.

ಹೀಗಾಗಿ ಇನ್ನಷ್ಟು ಹೊರೆಗೆ ಕಾರಣವಾಗುವ 7ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವಿಲ್ಲ ಎಂದು ಹಣಕಾಸು ಇಲಾಖೆ ತಕರಾರು ತೆಗೆದಿತ್ತು. ಕಳೆದ ಜು.4 ರಂದು ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ಹಣಕಾಸು ಇಲಾಖೆ ಕಾರ್ಯದರ್ಶಿ ರಾಜ್ಯದ ಆರ್ಥಿಕ ಸ್ಥಿತಿಯ ವಾಸ್ತವ ವಿವರಣೆ ನೀಡಿದ್ದರು. ಇದರಿಂದ ವಿಚಲಿತಗೊಂಡ ಸರ್ಕಾರ ತೀರ್ಮಾನವನ್ನು ಮುಂದೂಡಿತ್ತು.

ಆದರೆ, ಇದರಿಂದ ಅಸಮಾಧಾನಗೊಂಡ ನೌಕರರು ತಾಳ್ಮೆಕಳೆದುಕೊಳ್ಳುವ ಹಂತ ತಲುಪುತ್ತಿರುವುದನ್ನು ಅರಿತ ಸರ್ಕಾರ ಸೋಮವಾರ ಸಿಹಿ ಸುದ್ದಿ ನೀಡುವ ಮೂಲಕ ನೌಕರರ ಸಹನೆಗೆ ಜೈ ಎಂದಿದೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!