NEWSನಮ್ಮಜಿಲ್ಲೆನಮ್ಮರಾಜ್ಯ

ಆಗಸ್ಟ್‌.11ರಂದು KSRTC 4 ಸಾರಿಗೆ ನಿಗಮಗಳ SC, ST ನೌಕರರ ಸಭೆ- ಒಗ್ಗಟ್ಟಿಗಾಗಿ ಮುಕ್ತ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಸಭೆಯನ್ನು  ಇದೇ ಆ.11ರಂದು ಕರೆಯಲಾಗಿದೆ ಎಂದು KSRTC ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಬಿಎಂಟಿಸಿ ಅಧ್ಯಕ್ಷ ರುದ್ದೇಶ್‌ ಎಸ್‌. ನಾಯಕ್‌ ತಿಳಿಸಿದ್ದಾರೆ.

ಇದೇ ಆ.11ರಂದು ಮಧ್ಯಾಹ್ನ 3ಗಂಟೆಗೆ ಬೆಂಗಳೂರಿನ ಜೈಬೀಮ್ ನಗರದ ಪೂರ್ಣಿಮ ಟಾಕೀಸ್ ಎದುರುಗಡೆ ನಂ.16, ಜೆ.ಸಿ.ರೋಡ್,1ನೇ ಕ್ರಾಸ್, ನ್ಯೂ ಮಿಷನ್ ರೋಡ್‌ನಲ್ಲಿ ಇರುವ ಜೈಜೀಮ್ ಭವನದಲ್ಲಿ ಆಯೋಜಿಸಿಲಾಗಿದೆ.

ಸಭೆಯಲ್ಲಿ ನಾಲ್ಕೂ ನಿಗಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಟನೆಗಳ ಮುಖಂಡರು ಉಪಸ್ಥಿತರಿರಲಿದ್ದು, ಈ ಸಭೆಯ ಸಂಪೂರ್ಣ ಉಸ್ತುವಾರಿಯನ್ನು ದೊಡ್ಡಪ್ಪ ಎಚ್‌. ನರಕಲದಿನ್ನಿ ಹಾಗೂ ನಿಂಗಪ್ಪ ತಡಿಬಿಡಿ ಅವರು ವಹಿಸಿದ್ದಾರೆ  ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನು KSRTC, BMTC, NWKRTC ಮತ್ತು KKRTC ರಾಜ್ಯ, ವಲಯ, ವಿಭಾಗೀಯ, ಘಟಕ ಸಮಿತಿಯ ನಾಲ್ಕೂ ನಿಗಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರು ತಪ್ಪದೇ ಸಕಾಲಕ್ಕೆ ಆಗಮಿಸಿ ಮುಕ್ತವಾಗಿ ಚ್ರಚೆ ಮಾಡುವ ಮೂಲಕ  ಸಭೆಯ ಕಾರ್ಯ ಕಲಾಪಗಳನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಅಲ್ಲದೆ  ಬಹುದಿನಗಳ ನಂತರ “ಬಹುಜನರಲ್ಲಿ” ಕ್ರಾಂತಿಕಾರಿ ಅಲೆ ಎದ್ದಿದ್ದು, ಸಾರಿಗೆ ನಿಗಮಗಳ ಎಲ್ಲ ಎಸ್ಸಿ-ಎಸ್ಟಿ ನೌಕರರು ತಮ್ಮ ವೈಯಕ್ತಿಕ ಸಂಘಗಳ ಭೇದ ಭಾವ ಮರೆತು ಎಲ್ಲರೂ ಒಂದೇ ವೇದಿಕೆಗೆ ಆಗಮಿಸಿ ಒಂದೇ ಸಂಘಟನೆಯಲ್ಲಿ ಮುಂದುವರಿಯಲು ನಿರ್ಧರಿಸಿರುವುದು ನಿಜಕ್ಕೂ ಬಾಬಾ ಸಾಹೇಬರಿಗೆ ಕೊಡುವ ಗೌರವ ಅಂತಾನೆ ನಾನು ಭಾವಿಸುತ್ತೇನೆ  ಎಂದು ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ