CrimeNEWSನಮ್ಮಜಿಲ್ಲೆ

ಆತ್ಮಹತ್ಯೆಯಿಂದ ಮಗ ಮೃತಪಟ್ಟ ಸುದ್ದಿ ಕೇಳಿ, ತಾಯಿಯೂ ಅಪಘಾತದಲ್ಲಿ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಮಗ ಮೃತಪಟ್ಟ ವಿಚಾರ ಕೇಳಿ, ಆಘಾತಗೊಂಡು ಆಸ್ಪತ್ರೆಯಿಂದ ಹೊರ ಬಂದ ತಾಯಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೀಲಾವತಿ (45) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಮೋಹನ್‌ ಗೌಡ (20) ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಅಸುನೀಗಿದ ಯುವಕ.

ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಮೋಹನ್, ಬೈಕ್‌ ವಿಚಾರಕ್ಕೆ ತನ್ನ ಸ್ನೇಹಿತರೊಂದಿಗೆ ಜಗಳ ಮಾಡಿಕೊಂಡಿದ್ದ. ಬಳಿಕ ಮನೆಗೆ ಬಂದು ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದರು.

ಮೋಹನ್‌ ಸ್ನೇಹಿತರು ಮನೆಯ ಹೊರಗೆ ಬಂದು ಗಲಾಟೆ ಮಾಡುತ್ತಿರುವುದನ್ನು ಅವರ ತಂದೆ ಪೊಲೀಸರಿಗೆ ತಿಳಿಸಿದ್ದರು. ಮೋಹನ್‌ ಕೋಣೆಯ ಬಾಗಿಲು ತೆರೆಯಲಿಲ್ಲ. ಅನುಮಾನಗೊಂಡ ‍ಪೋಷಕರು ಪೊಲೀಸರ ಸಹಾಯದಿಂದ ಬಾಗಿಲು ತೆರೆದು ನೋಡಿದಾಗ, ಮೋಹನ್‌ ನೇಣು ಬಿಗಿದುಕೊಂಡಿದ್ದ.

ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಮೋಹನ್‌ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು ಎಂದು ಪೊಲೀಸರು ತಿಳಿಸಿದರು. ಮಗ ಮೃತಪಟ್ಟ ವಿಚಾರದಿಂದ ಆಘಾತಗೊಂಡಿದ್ದ ತಾಯಿ ಲೀಲಾವತಿ ಆಸ್ಪತ್ರೆಯಿಂದ ಹೊರಬಂದಿದ್ದರು. ರಸ್ತೆಗೆ ಬಂದ ಕೂಡಲೇ ವಾಹನಕ್ಕೆ ಡಿಕ್ಕಿ ಹೊಡೆದು ಅವರೂ ಮೃತಪಟ್ಟಿದ್ದಾರೆ.

ಮೃತ ಮೋಹನ್ ಗೌಡ, ಅವರ ತಾಯಿ ಲೀಲಾವತಿ ಮತ್ತು ತಂದೆ ಎಂಸಿ ಲೇಔಟ್ ನಲ್ಲಿ ವಾಸಿಸುತ್ತಿದ್ದರು, ಮೋಹನ್ ಗೌಡ ಅವರ ತಂದೆ ರೇಷನ್ ಅಂಗಡಿ ನಡೆಸುತ್ತಿದ್ದರು.

ಮಧ್ಯಾಹ್ನ 12.30ರ ವೇಳೆಗೆ ರೂಮಿಗೆ ತೆರಳಿದ ಮೋಹನ್ ಗೌಡ ಆತ್ಮಹತ್ಯೆಗೆ ಯತ್ನಿಸಿದ್ದ. ಅವನನ್ನು ವೆಸ್ಟ್ ಆಫ್ ಕಾರ್ಡ್ ರಸ್ತೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮಗ ಸಾವನ್ನಪ್ಪಿದ್ದಾನೆ ಎಂದು ತಿಳಿದ ಕೂಡಲೇ ಆಕೆ ರಸ್ತೆಯಲ್ಲಿ ಓಡಿ ಹೋದರು. ಕೂಡಲೇ ಅವರ ಸಂಬಂಧಿಕರು ಆಕೆಯನ್ನು ಸಮಾಧಾನ ಪಡಿಸಲು ಹಿಂದೆಯೇ ಓಡಿದರು

ಈವೇಳೆ ವೇಗವಾಗಿ ಬರುತ್ತಿದ್ದ ಕಾರಿಗೆ ಸಿಲುಕಿ ಆಕೆ ಮೃತಪಟ್ಟಿದ್ದಾರೆ. ಆಕೆಯನ್ನು ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಕೆ ಬದುಕುಳಿಯಲಿಲ್ಲ.

ಮೋಹನ್‌ ಆತ್ಮಹತ್ಯೆ ಸಂಬಂಧ ವಿಜಯನಗರ ಠಾಣೆ ಹಾಗೂ ತಾಯಿ ಲೀಲಾವತಿ ಅಪಘಾತ ಸಂಬಂಧ ವಿಜಯನಗರ ಸಂಚಾರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು