NEWS

ಆದ್ಯತಾ ಪಡಿತರ ಚೀಟಿ  ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ

ಪ್ರತಿ ತಿಂಗಳು ಕುಟುಂಬಕ್ಕೆ 2ಕೆಜಿ ಗೋದಿ ನೀಡಲು ಆಯವ್ಯಯದಲ್ಲಿ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ರಾಜ್ಯದಲ್ಲಿ 2020-21ನೇ ಸಾಲಿನಿಂದ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆಜಿ ಗೋದಿಯನ್ನು ಪ್ರತಿ ತಿಂಗಳು ನೀಡಲು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ವಿಧಾನಸಭೆಯಲ್ಲಿ  ಅರಕಲಗೂಡು ಶಾಸಕ ರಾಮಸ್ವಾಮಿ ಎ.ಟಿ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು 2019-20ನೇ ಸಾಲಿನಲ್ಲಿ ರಾಜ್ಯದಲ್ಲಿನ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿಗೆ 35 ಕೆ.ಜಿ. ಅಕ್ಕಿಯನ್ನು ಹಾಗೂ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಆದ್ಯತೇತರ ಪಡಿತರ ಚೀಟಿಯನ್ನು ಹೊಂದಿದ್ದು, ಪಡಿತರ ಧಾನ್ಯವನ್ನು ಪಡೆಯಲು ಸಹಮತಿಯನ್ನು ನೀಡಿರುವ ಏಕ ಸದಸ್ಯ ಪಡಿತರ ಕುಟುಂಬಕ್ಕೆ 5 ಕೆ.ಜಿ ಅಕ್ಕಿಯನ್ನು, ಇಬ್ಬರು ಹಾಗೂ ಅದಕ್ಕಿಂತ ಹೆಚ್ಚಿನ ಸದಸ್ಯರು ಹೊಂದಿರುವ ಪಡಿತರ ಕುಟುಂಬಕ್ಕೆ 10 ಕೆ.ಜಿ ಅಕ್ಕಿಯನ್ನು 15 ರೂ. ದರದಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.

KIA  ಮತ್ತು ಆನ್‍ಲೈನ್‍ನಲ್ಲಿ ಬಿದರಿ ಕಲಾಕೃತಿ ಮಾರಾಟ

ಭೌಗೋಳಿಕ ಗುರುತಿನ ನೋಂದಣಿ ಹೊಂದಿರುವ ರಾಜ್ಯದ ಬಿದರಿ ಕಲಾಕೃತಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ಆನ್‍ಲೈನ್ ಮುಖಾಂತರ ಮಾರಾಟ ಮಾಡುವ ಮೂಲಕ ಕರಕುಶಲ ಕಲೆಯ ಕುಶಲಕರ್ಮಿಗಳಿಗೆ ಹೆಚ್ಚಿನ ಮಾರುಕಟ್ಟೆ ಸೌಲಭ್ಯವನ್ನು ಒದಗಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಸದಸ್ಯ ವಿಜಯ ಸಿಂಗ್ ಅವರ ಪ್ರಶ್ನೆಗೆ ಮುಖ್ಯ ಮಂತ್ರಿಗಳ ಪರವಾಗಿ ಉತ್ತರಿಸಿ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ವಿಶ್ವವಿಖ್ಯಾತ ಬಿದ್ರಿ ಕಲೆಯಲ್ಲಿ ಸುಮಾರು 300 ಕುಟುಂಬಗಳು ತೊಡಗಿದ್ದು, ಇದರಲ್ಲಿ 108 ಕರಕುಶಲಕರ್ಮಿಗಳು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ನಿಗಮದ ವತಿಯಿಂದ ಬಿದರಿ ಕರಕುಶಲಕರ್ಮಿಗಳಿಗೆ ನೀಡುತ್ತಿರುವ ಅನೇಕ ಸೌಲಭ್ಯಗಳ ಕುರಿತು ಸಬೆಗೆ  ಮಾಹಿತಿ ನೀಡಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ