NEWSಕೃಷಿರಾಜಕೀಯ

ಆನಂದ್ ಸಿಂಗ್ ಅರಣ್ಯ ಖಾತೆ ಬಗ್ಗೆ ಏನು ಕನಸು ಕಂಡಿದ್ದರೋ ಗೊತ್ತಿಲ್ಲ: ಸಚಿವ ಬಿ.ಸಿ.ಪಾಟೀಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನನ್ನ ಕೆಲಸವನ್ನು ಆರಂಭಿಸಿದ್ದೇನೆ. ನನಗೆ ಯಾವ ಖಾತೆ ಕೊಡುತ್ತೀರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಕೇಳಿದ್ದೆ. ಕೃಷಿಗೆ ನಿನ್ನನ್ನು ಬಿಟ್ಟರೆ ಬೇರೆ ಯಾರೂ ಕಾಣುತ್ತಿಲ್ಲ ಅಂದಿದ್ದರು. ಸಂತೋಷದಿಂದ ನಾನು ಕೃಷಿ ಖಾತೆ ವಹಿಸಿಕೊಂಡಿದ್ದೇನೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಇಂದು ಕಚೇರಿಗೆ ಪೂಜೆ ಮಾಡಿ, ಅಧಿಕೃತವಾಗಿ ಕೆಲಸ ಆರಂಭಿಸಿ ಮಾತನಾಡಿದ ಅವರು, ನಾವು ಯಾವ ಖಾತೆಯಲ್ಲಿದ್ದರೂ ಅದು ಸರ್ಕಾರದ ಕೆಲಸ. ಆನಂದ್ ಸಿಂಗ್‌ಗೆ ಮೊದಲು ದೊಡ್ಡ ಖಾತೆಯನ್ನು ಕೊಟ್ಟಿದ್ದರು. ಆ ಖಾತೆಯನ್ನು ಕಿತ್ತುಕೊಂಡಿದ್ದಕ್ಕೆ ಅಸಮಾಧಾನವಾಗಿದೆ. ಖಾತೆ ದೊಡ್ಡದು ಅಂದರೆ ಹೆಚ್ಚು ಕೆಲಸ ಇರುತ್ತದೆ ಎಂದು ತಿಳಿಸಿದರು.

ಇನ್ನು ಅರಣ್ಯ ಖಾತೆ ಬಗ್ಗೆ ಏನು ಕನಸು ಕಂಡಿದ್ದರೆಂದು ಗೊತ್ತಿಲ್ಲ. 105+17 ಎರಡೂ ಸೇರಿದ್ದಕ್ಕೆ ಸರ್ಕಾರ ಸುಸೂತ್ರವಾಗಿದೆ. ಎರಡಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಅಸಮಾಧಾನ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿ, ಖಾತೆ ಹಂಚಿಕೆ ವೇಳೆ ಅಸಮಾಧಾನ ಸಹಜ. ಸಿಎಂ ಬೊಮ್ಮಾಯಿ ಅಸಮಾಧಾನವನ್ನು ಸರಿಪಡಿಸುತ್ತಾರೆ. ಎಲ್ಲದಕ್ಕೂ ಸದ್ಯದಲ್ಲಿಯೇ ತೆರೆಬೀಳುತ್ತದೆ ಎಂಬ ವಿಶ್ವಾಸದ ನುಡಿಗಳನ್ನಾಡಿದರು.

ನಮ್ಮ ಮಿತ್ರಮಂಡಳಿಯಲ್ಲಿ ಯಾವುದೇ ಬಿರುಕು ಇಲ್ಲ. ಸಚಿವ ಆನಂದ್ ಸಿಂಗ್ ಜತೆ ನಾನು ಚರ್ಚೆ ಮಾಡಿದ್ದೇನೆ. ಸದ್ಯದಲ್ಲಿಯೇ ಎಲ್ಲಾ ಅಸಮಾಧಾನ ಬಗೆಹರಿಯುತ್ತದೆ ಎಂದರು.

ಬಳಿಕ ಸಚಿವರು ವಿಜಯೋತ್ಸವ ಮಾಡುತ್ತಿದ್ದಾರೆಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿ.ಸಿ.ಪಾಟೀಲ್, ನಾವು ಯಾವುದೇ ವಿಜಯೋತ್ಸವವನ್ನು ಮಾಡಿಲ್ಲ. ನಾವು ಸಚಿವರಾಗಿದ್ದಕ್ಕೆ ಸಹಜವಾಗಿ ಜನ ಖುಷಿ ಪಟ್ಟಿದ್ದಾರೆ. ಸಂಭ್ರಮಾಚರಣೆ ಖುಷಿಯಿಂದ ಆಗಿದೆ ಏನೂ ಮಾಡುವುದಕ್ಕೆ ಆಗಲ್ಲ ಎಂದರು.

ಜನರು ಖುಷಿಯಿಂದ ಬಂದಾಗ ಹೊಡೆದು ಓಡಿಸಲು ಆಗಲ್ಲ. ಜನರಿಂದ ಆಯ್ಕೆಯಾದವರು, ಅವರ ಪ್ರೀತಿ ತಡೆಯಬಾರದು. ವಿಪಕ್ಷದಲ್ಲಿ ಇದ್ದವರು ಟೀಕೆ ಮಾಡುವುದು ಸಹಜ ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು