NEWSನಮ್ಮಜಿಲ್ಲೆನಮ್ಮರಾಜ್ಯ

ಆಮ್ ಆದ್ಮಿಪಕ್ಷದ ಪ್ರಯತ್ನದಿಂದ ಎಚ್ಚೆತ್ತ ಸರ್ಕಾರ: ತಪಿತು ಡಾ.ಸಿ.ರಾಮಚಂದ್ರಗೆ ರಾಜ್ಯೋತ್ಸವ ಪ್ರಶಸ್ತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಸಮಯೋಚಿತ ಪ್ರಯತ್ನದಿಂದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಈ ಹಿಂದಿನ ನಿರ್ದೇಶಕ ಡಾ.ಸಿ.ರಾಮಚಂದ್ರ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರವು ಕೊಡ ಮಾಡಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ತಡೆಯಲು ಯಶಸ್ವಿಯಾಗಿದೆ.

ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಸಚಿವರಾಗಿದ್ದ ಸುಧಾಕರ್ ಅವರ ಅನೇಕ ಭ್ರಷ್ಟಾಚಾರ ಬಾನಗಡಿಗಳಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿನ ನೂರಾರು ಕೋಟಿ ಅಕ್ರಮವು ಸಹ ಒಂದಾಗಿದೆ.

ಪಕ್ಷವು ಸತತವಾಗಿ ಈ ಹಗರಣವನ್ನು ಬೆಳಕಿಗೆ ತಂದು ಆರೋಪಗಳನ್ನು ಮಾಡಿತ್ತು. ಈ ಹಗರಣಗಳಲ್ಲಿ ನಿರ್ದೇಶಕ ಡಾ.ಸಿ.ರಾಮಚಂದ್ರ ಅವರ ಪಾತ್ರವನ್ನು ಎತ್ತಿ ಹಿಡಿದು ಈಗಾಗಲೇ ಸರ್ಕಾರಕ್ಕೆ ದೂರನ್ನು ಸಹ ನೀಡಲಾಗಿತ್ತು. ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಅನೇಕ ಕಡತಗಳನ್ನು ತರಿಸಿಕೊಂಡು ಈ ಬಗ್ಗೆ ಪರಿಶೀಲನೆಯನ್ನು ಸಹ ನಡೆಸಿತ್ತು. ಈಗಿನ ಕಾಂಗ್ರೆಸ್ ಸರ್ಕಾರವು ಈ ಎಲ್ಲ ಬಾನಗಡಿಗಳ ಬಗ್ಗೆ ಒಂದು ತನಿಖೆ ಮಾಡಲು ಸಮಿತಿಯನ್ನು ಈಗಾಗಲೇ ರಚಿಸಿದೆ.

ಆದರೆ ರಾಜ್ಯ ಸರ್ಕಾರದ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ರಾಮಚಂದ್ರ ಅವರ ಹೆಸರನ್ನು ನೋಡಿದ ತಕ್ಷಣ ಎಚ್ಚೆತ್ತುಕೊಂಡ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಮಂಜುಳಾ ಅವರೊಂದಿಗೆ ಮಾತನಾಡಿ ಈ ಬಗ್ಗೆ ಎಲ್ಲ ದಾಖಲೆಗಳನ್ನು ನೀಡಿ, ಈ ಬಗ್ಗೆ ತೀವ್ರ ಪ್ರತಿಭಟನೆಯನ್ನು ಸಹ ಸರ್ಕಾರದ ವಿರುದ್ಧ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಸಹ ನೀಡಿದ್ದರು.

ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಕೂಡಲೇ ಕಳಂಕಿತರಿಗೆ ಪಟ್ಟೆಯಿಂದ ಹೊರಗಿಟ್ಟು ಇಂದು ಸಂಜೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇವರಿಗೆ ಯಾವುದೇ ಪುರಸ್ಕಾರವನ್ನು ನೀಡಲಿಲ್ಲ.

ಪಕ್ಷದ ಈ ಪ್ರಯತ್ನಕ್ಕೆ ಪೂರಕವಾದ ಸರ್ಕಾರದ ಈ ನಡೆಯಿಂದಾಗಿ ಆಮ್ ಆದ್ಮಿ ಪಕ್ಷಕ್ಕೆ ಸಂಪೂರ್ಣ ಜಯ ಸಿಕ್ಕಂತಾಗಿದೆ. ಭ್ರಷ್ಟರಿಗೆ ಯಾವುದೇ ರೀತಿಯಲ್ಲಿಯೂ ರಾಜ್ಯ ಸರ್ಕಾರದ ಈ ರೀತಿಯ ಪುರಸ್ಕಾರಗಳನ್ನು ಸಲ್ಲಿಸುವುದು ಕೆಟ್ಟ ನಡವಳಿಕೆ. ಈ ಬಗ್ಗೆ ಮುಂದಿನ ದಿವಸಗಳಲ್ಲಿ ಅಧಿಕಾರಿಗಳು ಮತ್ತು ಮಂತ್ರಿ ಮಹೋದಯರು ಎಚ್ಚೆತ್ತುಕೊಂಡು ತಮ್ಮ ನಿರ್ಧಾರಗಳನ್ನು ಮಾಡಬೇಕೆಂದು ಆಮ್ ಆದ್ಮಿ ಪಕ್ಷವು ಈ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ