NEWSನಮ್ಮರಾಜ್ಯ

ಇಂದು ಬೆಂಗಳೂರು, ಬೆಳಗಾವಿಯಲ್ಲಿ ತಲಾ ಆರು ಸೋಂಕಿತರು ಪತ್ತೆ

ರಾಜ್ಯದಲ್ಲಿ ಏ.25ರಂದು 15 ಹೊಸ ಸೋಂಕಿತರು l ಭಾರತದಲ್ಲಿ 24,506 ಜನರಲ್ಲಿ ವೈರಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ 15 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ ಆಗಿದೆ.

ರಾಜ್ಯದ ರಾಜಧಾನಿಯಲ್ಲಿ ಇಂದು ಮಧ್ಯಾಹ್ನದ ವರೆಗೆ 6 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆ ಆಗಿದೆ.

ಬೆಂಗಳೂರಿನ 6, ಬೆಳಗಾವಿಯಲ್ಲಿ 6, ಮಂಡ್ಯ, ಬಂಟ್ವಾಳ ಮತ್ತು ಚಿಕ್ಕಬಳ್ಳಾಪುರದಲ್ಲೂ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.

ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಇಂದು ಮಧ್ಯಾಹ್ನದ ವರೆಗೆ ತಲಾ ಆರು ಕೊರೊನಾ ವೈರಸ್‌ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನ ಐವರು ಪುರುಷರು ಮತ್ತು ಓರ್ವ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇನ್ನು ಬೆಳಗಾವಿಯ ಹಿರೇಬಾಗೇವಾಡಿಯ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರಿಗೆ ಸೋಂಕು ತಗುಳಿದೆ.

ಇನ್ನು ಮಂಡ್ಯ ಮತ್ತು ಮತ್ತು ಚಿಕ್ಕಬಳ್ಳಾಪುರದಲ್ಲಿ ಪುರುಷು ಹಾಗೂ ಬಂಟ್ವಾಳದಲ್ಲಿ ಮಹಿಳೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್‌-19 ಪ್ರಕರಣಗಳು 489ಕ್ಕೆ ಏರಿಕೆಯಾಗಿದ್ದು, ಅವುಗಳಲ್ಲಿ 18 ಮಂದಿ ಮೃತಪಟ್ಟಿದ್ದಾರೆ. 153 ಮಂದಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿರಿ  ಏ.24ರ ಸಂಜೆ ವೇಳೆಗೆ 29 ಕೊರೊನಾ ಹೊಸ ಸೋಂಕಿತರು ಪತ್ತೆ

ದೇಶದಲ್ಲಿ 24,506 ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 24,506 , ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 775 ಮಂದಿ ಮೃತಪಟ್ಟಿದ್ದಾರೆ. 5,063 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 28,34,136  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,97,373 ಜನರು ಮೃತಪಟ್ಟಿದ್ದಾರೆ. 8,07,593 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

 

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...