NEWSನಮ್ಮರಾಜ್ಯ

ಇಂದು ಮತ್ತೆ 10 ಮಂದಿಗೆ ಕೊರೊನಾ ಪಾಸಿಟಿವ್‌

ರಾಜ್ಯದಲ್ಲಿ ಒಟ್ಟು 418ಕ್ಕೇರಿದ ಸೋಂಕಿತರ ಸಂಖ್ಯೆ l  ಮೃತರ ಸಂಖ್ಯೆ 17ಕ್ಕೆ ಏರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಇಂದು ಬೆಳಗ್ಗೆ 7 ಮಂದಿಗೆ ಕೊರೊನಾ ಪಾಸಿಟಿವ್‌  ಇದದ್ದು ಸಂಜೆವೇಳೆ10ಕ್ಕೆ ಏರಿದೆ,  ಈ ಮೂಲಕ   418ಕ್ಕೇರಿದ ಸೋಂಕಿತರ ಸಂಖ್ಯೆ, ಅದರಲ್ಲಿ 112  ರಿಂದ 129ಕ್ಕೆ ಕೊರೊನಾ ಸೋಂಕಿನಿಂದ ಗುಣಮುಖರ ಸಂಖ್ಯೆ ಏರಿಕೆ ಕಂಡಿದೆ.

ವಿಜಯಪುರ ಮತು ಕಲಬುರಗಿಯಲ್ಲಿ ತಲಾ ಮೂರು, ನಂಜನಗೂಡಿನಲ್ಲಿ ಎರಡು ಹಾಗೂ ದಕ್ಷಿಣ  ಕನ್ನಡ ಜಿಲ್ಲೆ ಮತ್ತು ಬೆಳಗಾವಿಯಲ್ಲಿ ಒಂದೊಂದು ಪ್ರಕರಣ ಕಂಡುಬಂದಿದೆ.

ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 418ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆ 17ಮಂದಿ ಅಸುನೀಗಿದ್ದು, 272 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 129ಮಂದಿ ಗುಣಮುಖರಾಗಿದ್ದಾರೆ. ಅಂದರೆ ನಿನ್ನೆವರೆಗೆ ಇದ್ದ 280 ಮಂದಿಯಲ್ಲಿ ಇಂದು ಒಂದೇದಿನ 17 ಮಂದಿ ಮನೆಗೆ ಮರಳಿರುವುದರಿಂದ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಮತ್ತು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇನ್ನು ನಾಗರಿಕರು ಕೂಡ ಅವರ ಶ್ರಮಕ್ಕೆ ಕೈಜೋಡಿಸುವ ಮೂಲಕ ಈ ವಿಶ್ವಮಾರಿ ಕೊರೊನಾವನ್ನು ದೇಶದಿಂದ ಬಡಿದೋಡಿಸಲು ಮುಂದಾಗಬೇಕು.

ದೇಶದಲ್ಲಿ 18658ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 18658 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 592 ಮಂದಿ ಮೃತಪಟ್ಟಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 24,82,556 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,70482 ಜನರು ಮೃತಪಟ್ಟಿದ್ದಾರೆ.

4 Comments

  • ವಿಜಯಪಥ ಕನ್ನಡ ನ್ಯೂಸ್‌ ತುಂಬ ಚೆನ್ನಾಗಿ ಬರುತ್ತಿದೆ. ಇನ್ನಷ್ಟು ಹೊಸತನವನ್ನು ಕೊಡುವ ಮೂಲಕ ನಿಮ್ಮ ಓದುಗರನ್ನು ರಂಜಿಸುವ ಮತ್ತು ಇನಷ್ಟು ನಿಖರವಾದ ಮಾಹಿತಿ ನೀಡುವ ಕಡೆ ಹೆಚ್ಚಿನ ಗಮನ ಕೊಡಬೇಕಿದೆ.
    ಒಟ್ಟಾರೆ ಕನ್ನಡದಲ್ಲಿ ತಾಜಾ ಸುದ್ದಿಗಳಣ್ನು ಸ್ಪಷ್ಟತೆಯೊಂದಿಗೆ ನೀಡುತ್ತಿರುವುದಕ್ಕೆ ನಿಮಗೆ ಧನ್ಯವಾದ

  • ನಿಮ್ಮ ವಿಜಯಪಥ ಕನ್ನಡ ನ್ಯೂಸ್‌ ಹೊಸತನವನ್ನು ನೀಡಲು ಶ್ರಮಿಸುತ್ತಿದೆ. ಜತೆಗೆ ಕೊರೊನಾ ಸಂಬಂಧಿತ ಸುದ್ದಿಗಳನ್ನು ಕೆಲ ನಿಮಿಷ ಅಥವಾ ಗಂಟೆಗಳು ವಿಳಂವಾದರೂ ನಿಖರವಾದ ಸುದ್ದಿ ಕೊಡುವುದರಲ್ಲಿ ಮುಂದಿದೆ ಎಂಬುದರಲ್ಲಿ ಎರಡು ಮಾತಿಲ್ಲ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್