NEWSನಮ್ಮರಾಜ್ಯ

ಇಂದು ಮತ್ತೆ 10 ಮಂದಿಗೆ ಕೊರೊನಾ ಪಾಸಿಟಿವ್‌

ರಾಜ್ಯದಲ್ಲಿ ಒಟ್ಟು 418ಕ್ಕೇರಿದ ಸೋಂಕಿತರ ಸಂಖ್ಯೆ l  ಮೃತರ ಸಂಖ್ಯೆ 17ಕ್ಕೆ ಏರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಇಂದು ಬೆಳಗ್ಗೆ 7 ಮಂದಿಗೆ ಕೊರೊನಾ ಪಾಸಿಟಿವ್‌  ಇದದ್ದು ಸಂಜೆವೇಳೆ10ಕ್ಕೆ ಏರಿದೆ,  ಈ ಮೂಲಕ   418ಕ್ಕೇರಿದ ಸೋಂಕಿತರ ಸಂಖ್ಯೆ, ಅದರಲ್ಲಿ 112  ರಿಂದ 129ಕ್ಕೆ ಕೊರೊನಾ ಸೋಂಕಿನಿಂದ ಗುಣಮುಖರ ಸಂಖ್ಯೆ ಏರಿಕೆ ಕಂಡಿದೆ.

ವಿಜಯಪುರ ಮತು ಕಲಬುರಗಿಯಲ್ಲಿ ತಲಾ ಮೂರು, ನಂಜನಗೂಡಿನಲ್ಲಿ ಎರಡು ಹಾಗೂ ದಕ್ಷಿಣ  ಕನ್ನಡ ಜಿಲ್ಲೆ ಮತ್ತು ಬೆಳಗಾವಿಯಲ್ಲಿ ಒಂದೊಂದು ಪ್ರಕರಣ ಕಂಡುಬಂದಿದೆ.

ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 418ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆ 17ಮಂದಿ ಅಸುನೀಗಿದ್ದು, 272 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 129ಮಂದಿ ಗುಣಮುಖರಾಗಿದ್ದಾರೆ. ಅಂದರೆ ನಿನ್ನೆವರೆಗೆ ಇದ್ದ 280 ಮಂದಿಯಲ್ಲಿ ಇಂದು ಒಂದೇದಿನ 17 ಮಂದಿ ಮನೆಗೆ ಮರಳಿರುವುದರಿಂದ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಮತ್ತು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇನ್ನು ನಾಗರಿಕರು ಕೂಡ ಅವರ ಶ್ರಮಕ್ಕೆ ಕೈಜೋಡಿಸುವ ಮೂಲಕ ಈ ವಿಶ್ವಮಾರಿ ಕೊರೊನಾವನ್ನು ದೇಶದಿಂದ ಬಡಿದೋಡಿಸಲು ಮುಂದಾಗಬೇಕು.

ದೇಶದಲ್ಲಿ 18658ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 18658 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 592 ಮಂದಿ ಮೃತಪಟ್ಟಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 24,82,556 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,70482 ಜನರು ಮೃತಪಟ್ಟಿದ್ದಾರೆ.

4 Comments

  • ವಿಜಯಪಥ ಕನ್ನಡ ನ್ಯೂಸ್‌ ತುಂಬ ಚೆನ್ನಾಗಿ ಬರುತ್ತಿದೆ. ಇನ್ನಷ್ಟು ಹೊಸತನವನ್ನು ಕೊಡುವ ಮೂಲಕ ನಿಮ್ಮ ಓದುಗರನ್ನು ರಂಜಿಸುವ ಮತ್ತು ಇನಷ್ಟು ನಿಖರವಾದ ಮಾಹಿತಿ ನೀಡುವ ಕಡೆ ಹೆಚ್ಚಿನ ಗಮನ ಕೊಡಬೇಕಿದೆ.
    ಒಟ್ಟಾರೆ ಕನ್ನಡದಲ್ಲಿ ತಾಜಾ ಸುದ್ದಿಗಳಣ್ನು ಸ್ಪಷ್ಟತೆಯೊಂದಿಗೆ ನೀಡುತ್ತಿರುವುದಕ್ಕೆ ನಿಮಗೆ ಧನ್ಯವಾದ

  • ನಿಮ್ಮ ವಿಜಯಪಥ ಕನ್ನಡ ನ್ಯೂಸ್‌ ಹೊಸತನವನ್ನು ನೀಡಲು ಶ್ರಮಿಸುತ್ತಿದೆ. ಜತೆಗೆ ಕೊರೊನಾ ಸಂಬಂಧಿತ ಸುದ್ದಿಗಳನ್ನು ಕೆಲ ನಿಮಿಷ ಅಥವಾ ಗಂಟೆಗಳು ವಿಳಂವಾದರೂ ನಿಖರವಾದ ಸುದ್ದಿ ಕೊಡುವುದರಲ್ಲಿ ಮುಂದಿದೆ ಎಂಬುದರಲ್ಲಿ ಎರಡು ಮಾತಿಲ್ಲ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ