NEWSನಮ್ಮರಾಜ್ಯರಾಜಕೀಯ

ಇದೆಂಥಾ ಸ್ಥಿತಿ ಬಂತು ಬಿಜೆಪಿಗೆ? ಸಚಿವ ಮಾಧುಸ್ವಾಮಿ ದಾಟಿಯಲ್ಲೇ ಕಾಲೆಳೆದ ಎಎಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಜನರ ಮನೆ ಬಾಗಿಲಿನಲ್ಲಿ ನಿಂತು ಮತ ಭಿಕ್ಷೆ ಕೇಳಬೇಕು. ಕೊಡದಿದ್ದರೂ ಬಿಡಬಾರದು ಎಂಬ ಸಚಿವ ಮಾಧುಸ್ವಾಮಿ ಅವರ ಭಾಷಣವನ್ನು ಎಎಪಿ ರಾಜ್ಯ ಘಟಕ ಗೇಲಿ ಮಾಡಿದ್ದು, ಈ ಬಗ್ಗೆ ಟ್ವಿಟರ್‌ನಲ್ಲಿ ಬಿಜೆಪಿಎ ಈ ಸ್ಥಿತಿ ಬರಬಾರದಿತ್ತು ಎಂಬ ದಾಟಿಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ.

ಈಗಾಗಲೇ ನಿಮ್ಮ ಕಾರ್ಯಕರ್ತರನ್ನು ಕೊಂದು ತಿನ್ನುತ್ತಿದ್ದೀರ, ಕಾರ್ಯಕರ್ತರನ್ನು ಬೀದಿಗೆ ತಂದಿದ್ದೀರಾ, ನಿಮ್ಮ ಕಾರ್ಯಕರ್ತರು ಅಳುಕುವಂತೆ ಮಾಡಿದ್ದೀರಾ. ಇನ್ನು ನಿಮ್ಮನ್ನು ನಂಬಿದ್ದಕ್ಕೆ ಉಳಿದವರು ನಿಮ್ಮ ಕಾರ್ಯಕರ್ತರು ಜನರ ಕೈಕಾಲು ಹಿಡಿಯುವುದೇ ಅಲ್ಲವೇ. ಇದೆಂಥಾ ಸ್ಥಿತಿ ಬಂತು ಬಿಜೆಪಿಗೆ ಎಂದು ಆಮ್‌ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ.

ತುಮಕೂರಿನಲ್ಲಿ ಗುರುವಾರ ಬಿಜೆಪಿ ಹಮ್ಮಿಕೊಂಡಿದ್ದ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಬಿಜೆಪಿ ಕಾರ್ಯಕರ್ತರು ಭಿಕ್ಷುಕರಂತೆ ಮತ ಕೇಳಬೇಕು ಎಂದು ಹೇಳಿದ್ದರು.

ನಮ್ಮ ಮುಖದ ಮೇಲೆ ಜನರು ವೋಟು ಬಿಸಾಕುವವರೆಗೂ ಬಿಡಬಾರದು. ಆ ರೀತಿ ಬಿಜೆಪಿ ಕಾರ್ಯಕರ್ತರು ಕೆಲಸ ಮಾಡಬೇಕು. ಭಿಕ್ಷೆ ಬೇಡುವ ಭಿಕ್ಷುಕರಂತಾಗಬೇಕು. ತಿರುಪೆ ಬೇಡುವವನಿಗೆ ಏನೂ ಕೊಡದಿದ್ದರೆ ಏನಾದರೂ ಕೊಡಿ, ಎಷ್ಟಾದರೂ ಕೊಡಿ ಎಂದು ಗೋಗರೆಯುತ್ತಾನೆ. ಕೊನೆಗೆ ತೊಲಗಿದರೆ ಸಾಕೆಂದು ಏನಾದರೂ ಕೊಟ್ಟು ಕಳುಹಿಸುತ್ತೇವೆ. ಅದೇ ರೀತಿ ಜನರ ಮನೆ ಬಾಗಿಲಿನಲ್ಲಿ ನಿಂತು ಮತ ಭಿಕ್ಷೆ ಕೇಳಬೇಕು. ಕೊಡದಿದ್ದರೆ ಬಿಡಬಾರದು. ಐದರಲ್ಲಿ ಕೊನೆಗೆ ಎರಡು–ಮೂರಾದರೂ ವೋಟು ಬರುವಂತೆ ನೋಡಿಕೊಳ್ಳಬೇಕು. ಪಕ್ಷದ ಪರವಾದ ಅಲೆ ಸೃಷ್ಟಿಸಿದರೆ ಗೆಲುವು ಸುಲಭವಾಗುತ್ತದೆ ಎಂದು ಹೇಳಿದ್ದರು.

ಬಿಜೆಪಿ ಬ್ರಹ್ಮ ರಾಕ್ಷಸ: ಭ್ರಷ್ಟಾಚಾರದ ರಕ್ತ ಬೀಜಾಸುರರನ್ನು ಹುಟ್ಟಿಸಿದ್ದೇ ಕಾಂಗ್ರೆಸ್‌ ಎಂಬ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಹೇಳಿಕೆ ಬಗ್ಗೆಯೂ ಎಎಪಿ ಕುಹಕವಾಡಿದೆ.

ಹೌದು ಸ್ವಾಮಿ, ಹುಟ್ಟಿಸಿದ್ದು ಕಾಂಗ್ರೆಸ್ಸೇ. ಆದರೆ ಅವರನ್ನು ತಂದು ಸಾಕುತ್ತಿರುವುದು ನೀವು (ಬಿಜೆಪಿ). ಅಲ್ಲದೆ, ನೀವುಗಳು ಭ್ರಷ್ಟಾಚಾರ ಮಾಡುವುದರಲ್ಲಿ ಕೇವಲ ರಕ್ತಬೀಜಾಸುರರಾಗಿ ಉಳಿದಿಲ್ಲ, ಬ್ರಹ್ಮ ರಾಕ್ಷಸರಾಗಿದ್ದೀರಿ. ನಿಮ್ಮಿಬ್ಬರಿಂದಲು ದೇಶಕ್ಕೆ ಮುಕ್ತಿ ಬೇಕಿದೆ ಎಂದು ಎಎಪಿ ಅಧಿಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್‌ ಮಾಡಿದೆ.

ಬಿಜೆಪಿ ಬ್ರೋಕರ್ ಪಾರ್ಟಿಯಾಗಿದ್ದು, ವಿಧಾನಸೌಧವೇ ಸರ್ಕಾರಿ ಕೆಲಸಗಳ ಮಾರಾಟದ ಶಾಪಿಂಗ್ ಮಾಲ್‌ ಆಗಿದೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದ್ದ ಪ್ರಲ್ಹಾದ್‌ ಜೋಶಿ, ಕಾಂಗ್ರೆಸ್ ಪಕ್ಷ ಎಂದರೆ ಭ್ರಷ್ಟಾಚಾರ, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಮನೆ ಎದುರು ಓಡಾಡುವವರನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ. ಭ್ರಷ್ಟಾಚಾರ ಆರಂಭವಾಗಿದ್ದೇ ನೆಹರೂ ಕಾಲದಲ್ಲಿ. ಭ್ರಷ್ಟಾಚಾರದ ರಕ್ತಬೀಜಾಸುರರನ್ನು ಹುಟ್ಟಿಸಿದ್ದೇ ಕಾಂಗ್ರೆಸ್ ಎಂದು ಹೇಳಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು