NEWSನಮ್ಮಜಿಲ್ಲೆನಮ್ಮರಾಜ್ಯ

ಇಂದಿನಿಂದ ದಸರಾ ಗಜಗಳಿಗೆ ತರಬೇತಿ ಆರಂಭ- ಅರಮನೆಯಿಂದ ಬನ್ನಿಮಂಟಪದವರೆಗೂ ತಾಲೀಮು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಆರಂಭವಾಗಿದ್ದು, ಅದರ ಅಂಗವಾಗಿ ಇಂದಿನಿಂದ ದಸರಾ ಗಜಪಡೆಗೆ ತಾಲೀಮು ಆರಂಭವಾಗಿದೆ. ಹೀಗಾಗಿ ಅರಮನೆಯಿಂದ ಬನ್ನಿಮಂಟಪದವರೆಗೂ ಈ ತಾಲೀಮು ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ನಡೆಯಲಿದೆ.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ಶುರುವಾಗಿದೆ. ಮೊದಲ ವಾರ ಆನೆಗಳಿಗೆ ತಾವು ಸಾಗಬೇಕಾದ ಹಾದಿಯ ಪರಿಚಯ ಮಾಡಿಸುವ ಕೆಲಸ ನಡೆಯುತ್ತದೆ. ನಂತರ ಹಂತ ಹಂತವಾಗಿ ಆನೆಗಳಿಗೆ ಭಾರ ಹಾಕಿ ತಾಲೀಮು ನಡೆಸಲಾಗುತ್ತದೆ.

ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆಯಲ್ಲಿ ದಸರಾ ನಡೆಯದ ಕಾರಣ ಈ ಮಾರ್ಗವನ್ನು ಆನೆಗಳು ಮರೆತಿರುತ್ತವೆ. ಈ ದೃಷ್ಟಿಯಿಂದ ಈ ಬಾರಿ ಒಂದು ವಾರ ಕಾಲ ಕೇವಲ ಹಾದಿ ಪರಿಚಿಯಿಸುವ ತಾಲೀಮು ನಡೆಸಲಾಗುತ್ತಿದೆ. ಇದರ ಜತೆಗ ಜನಗಳನ್ನು ಕಂಡರೆ ಗಝಪಡೆ ಬೆದರದಂತೆಯೂ ತರಬೇತಿ ನೀಡಲಾಗುತ್ತಿದೆ.

57 ವರ್ಷದ ಅಭಿಮನ್ಯು, 22 ವರ್ಷದ ಭೀಮ, 38 ವರ್ಷದ ಮಹೇಂದ್ರ ಹಾಗೂ 39 ವರ್ಷದ ಗೋಪಲಸ್ವಾಮಿ, 63 ವರ್ಷದ ಅರ್ಜುನ, 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ, 40 ವರ್ಷದ ಶ್ರೀರಾಮ ಹಾಗೂ 63 ವರ್ಷದ ವಿಜಯಾ, 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮಿ ಹಾಗೂ 18 ವರ್ಷದ ಪಾರ್ಥಸಾರಥಿ ಆನೆಗಳ ಆಗಮನವಾಗಿದೆ.

ಇನ್ನು ದಸರಾ ಹಬ್ಬವೆಂದರೆ ಅಂಬಾರಿಯೇ ಪ್ರಮುಖ ಆಕರ್ಷಣೆಯಾಗಿರಲಿದ್ದು ಆ ಅಂಬಾರಿಯನ್ನು ಹೊತ್ತು ಸಾಗುವ ಗಜಗಳ ಪಾತ್ರವು ಪ್ರಮುಖವಾಗಿದೆ. ಈ ಹಿನ್ನೆಯಲ್ಲಿ ಆನೇಗಳಿಗೆ ತರಬೇತಿ ಕೊಡುವುದು ಬಹಳ ಮುಖ್ಯವಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ