NEWSನಮ್ಮಜಿಲ್ಲೆನಮ್ಮರಾಜ್ಯ

ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ

KSRTC MD ಅನ್ಬುಕುಮಾರ್‌
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣವನ್ನು ಇಂದಿನಿಂದಲೇ ಪಾವತಿಸುವಂತೆ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇಂದು ಡಿ.21ರಂದು ನಾಲ್ಕೂ ನಿಗಮದ ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲ ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ, ಎಲ್ಲ ಕಾರ್ಯ ನಿರ್ವಾಹಕ ಅಭಿಯಂತರರಿಗೂ ಸೂಚನೆ ನೀಡಿದ್ದಾರೆ.

01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ವೇತನ ನಿಗದಿಯನ್ವಯ, ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣ ವ್ಯತ್ಯಾಸಗಳನ್ನು ಲೆಕ್ಕಾಚಾರಗೊಳಿಸಿ. ಪಾವತಿಸಬೇಕಾದ ನಿವ್ವಳ ಮೊತ್ತದ ಕೈಮ್‌ಗಳನ್ನು ಸಿದ್ದಪಡಿಸಿಕೊಳ್ಳುವಂತೆ ಆದೇಶ ನೀಡಲಾಗಿತ್ತು.

ಮುಂದುವರೆದು ಈ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಉಪಧನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣ ವ್ಯತ್ಯಾಸದ ಮೊತ್ತವನ್ನು 21.12.2024 ರಿಂದ ಪಾವತಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎಂಡಿ ಸೂಚಿಸಿದ್ದಾರೆ.

2020ರ ಜನವರಿ 1ರಿಂದ ಅನ್ವಯವಾಗುವಂತೆ ಮಾರ್ಚ್‌ 2023ರಲ್ಲಿ  ಹೆಚ್ಚಳವಾಗಿರುವ ಶೇ.15ರಷ್ಟು ವೇತನದ 38 ತಿಂಗಳ ಹಿಂಬಾಕಿ ಕೊಡುವ ಬಗ್ಗೆಯೂ ಕ್ರಮ ತೆಗೆದುಕೊಂಡು   ಕೂಡಲೇ ಬಿಡುಗಡೆ ಮಾಡಬೇಕು ಎಂದು ನಿವೃತ್ತ ನೌಕರರು ಆಗ್ರಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ