NEWSನಮ್ಮಜಿಲ್ಲೆ

ಇಂದಿರಾ ಕ್ಯಾಂಟೀನ್‌ನಲ್ಲಿ ಉಪಾಹಾರ ವಿತರಿಸಿದ ಜಿಲ್ಲಾಧಿಕಾರಿ

ದೊಡ್ಡಬಳ್ಳಾಪುರದ ಕ್ಯಾಂಟೀನ್‌ಗೆ ಭೇಟಿ l ಆಹಾರದ ಗುಣಮಟ್ಟ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಇಂದಿರಾ ಕ್ಯಾಂಟೀನ್‌ನಲ್ಲಿ ಬೆಳಗಿನ ಉಪಾಹಾರವನ್ನು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ವಿತರಿಸುವ ಮೂಲಕ ಬಡವರ ಹಸಿವು ನೀಗಿಸಿದರು.

ಕೊರೋನಾ ವೈರಾಣು ಸೋಂಕು ಹರಡದಂತೆ ಲಾಕ್ ಡೌನ್ ಆದೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಜಾರಿಯಲ್ಲಿರುವ ಹಿನ್ನೆಲೆ, ಕ್ಯಾಂಟೀನ್ ಭೇಟಿ ನೀಡಿದ ಜಿಲ್ಲಾಧಿಕಾರಿ ಆಹಾರವನ್ನು ಪರಿಶೀಲಿಸಿದ ನಂತರ ಸಾರ್ವಜನಿಕರಿಗೆ ವಿತರಿಸಿದರು.

ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿರುವುದರಿಂದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ದಿನದಿಂದ ದಿನಕ್ಕೆ ಮಹಾಮಾರಿ ಎಲ್ಲೆಡೆಯೂ ಆವರಿಸುತ್ತಿದೆ. ಆದ್ದರಿಂದ ಅಕ್ಕಪಕ್ಕದ ಮನೆಯವರು ಪರ ಸ್ಥಳಗಳಿಗೆ ಹೋಗಿ ಬಂದಿದ್ದರೆ ಅವರ ವಿವರವನ್ನು ಕೊಡಿ ವೈದ್ಯರ ತಂಡ ಸ್ಥಳಕ್ಕೆ ಧಾವಿಸಿ ಪರೀಕ್ಷಿಸಲಿದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕು ತಹಸೀಲ್ದಾರ್ ಶಿವರಾಜು,  ನಗರಸಭೆ ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ