NEWSದೇಶ-ವಿದೇಶ

ಇದೇ ಭಾನುವಾರ 9 ನಿಮಿಷ ವಿದ್ಯುತ್‌ ದೀಪ ಆರಿಸಿ ಹಣತೆ ಹಚ್ಚಿ

ಕೊರೊನಾ ಪಿಡುಗು ತೊಲಗಿಸಲು ಪ್ರತಿ ಭಾರತೀಯನಿಗೆ ಪ್ರಧಾನ ಮಂತ್ರಿ ಮೋದಿ ಕರೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿಶ್ವ ಹೆಮ್ಮಾರಿ ಕೊರೊನಾ ವಿರುದ್ಧ 21ದಿನಗಳ ವರೆಗೆ ದೇಶವೇ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಇದೇ ಭಾನುವಾರ (ಏ.5) ರಾತ್ರಿ 9 ಗಂಟೆಯಿಂದ 9 ನಿಮಿಷಗಳು ಮನೆಯ ವಿದ್ಯುತ್‌ ಲೈಟ್‌ ಆರಿಸಿ ಹಣತೆ, ಮೊಂಬತ್ತಿ ಅಥವಾ ಮೊಬೈಲ್‌ ಟಾರ್ಚ್‌ ಲೈಟ್‌ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿ ಭಾರತೀಯನಿಗೂ ಕರೆ  ನೀಡಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಯಲ್ಲಿ ಮಾಧ್ಯಮಗಳಿಗೆ ಹರಿಯಬಿಟ್ಟ ವಿಡಿಯೋ ಸಂದೇಶದಲ್ಲಿ ದೇಶದ ಸಮಗ್ರ ಜನತೆಯನ್ನು ಕುರಿತು ಮಾತನಾಡಿದ ಮೋದಿ, ಕೊರೊನಾ ಇಡೀ ವಿಶ್ವವನ್ನೇ ಕಾಡುತ್ತಿದ್ದು, ಇದರ ವಿರುದ್ಧ ನಮ್ಮ ದೇಶ ಮಾತ್ರವಲ್ಲ ಪ್ರಪಂಚವೇ ಲಾಕ್‌ಡೌನ್‌ ಆಗಿದ್ದು, ಪ್ರತಿಯೊಬ್ಬರೂ ಈ ಮಾರಿಯನ್ನು ಹೊಡೆದೋಡಿಸಲು ಪಣತೊಟ್ಟಿದ್ದಾರೆ. ಅದರಲ್ಲಿ ಪ್ರತಿ ಭಾರತೀಯನೂ ಅಭೂತಪೂರ್ವ ಬೆಂಬಲ ಮತ್ತು ಸಹಕಾರ ನೀಡುತ್ತಿರುವುದು ಮಹಾ ಮಾರಿ ವಿರುದ್ಧ ಹೋರಾಟಕ್ಕೆ ಸಿಗುವ ಜಯವಾಗಿದೆ ಎಂದರು.

ಇಂದು ಇರುವ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ಮನೆಯಲ್ಲೇ ಇರುವುದರಿಂದ ಒಂದು ರೀತಿಯ ಮಾನಸಿಕ ಖಿನ್ನತೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ಅದು ನನಗೂ ಗೊತ್ತು. ಆದರೂ ಈ ಕೊರೊನಾ ಬೀದಿ ಮಾರಿಯನ್ನು ಮನೆಯೊಳಗೆ ಕರೆಯದೆ ಅದು ಬಂದ ದಾರಿಯಲ್ಲೇ ಹೋಗುವಂತೆ, ಜತೆಗೆ ಯಾವುದೇ ಸುಂಕ ಪಡೆಯದೇ ಹಿಂದಿರುಗವಂತೆ ಮಾಡುವ ದೃಷ್ಟಿಯಿಂದ ಇದು ಅನಿವಾರ್ಯವಾಗಿದೆ ಎಂಬ ಸಂದೇಶ ನೀಡಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಮನೆಯಲ್ಲೇ ಇದ್ದೀರಿ ಇದು ಕೊರೊನಾ ಪಿಡುಗನ್ನು ತೊಲಗಿಸುವ ಮಾರ್ಗವಾಗಿದೆ. ಅದರಂತೆ ನೀವು ಇಂದು ಮನೆಯಲ್ಲೇ ಇರುವುದರಿಂದ ನಿಮ್ಮಲ್ಲಿ ಕಾಡುತ್ತಿರುವ ಖಿನ್ನತೆಯನ್ನು ಬಡಿದೋಡಿಸಿ ಮನಸ್ಸಿಗೆ ಒಂದಷ್ಟು ಮುದ ನೀಡುವ ದೃಷ್ಟಿಯಿಂದ ಇದೇ ಭಾನುವಾರ ದೇಶವಾಸಿಗಳೆಲ್ಲ ಕೇವಲ 9 ನಿಮಿಷ ನಿಮ್ಮ ಮನೆಯಲ್ಲಿ ಹಣತೆ ಹಚ್ಚಿ ಆ ಮೂಲಕ ದೇಶದ ಪ್ರತಿ ಜನರೊಂದಿಗೆ ಇದ್ದೇವೆ ಎಂಬ ಮನೋಭಾವನೆಯನ್ನು ವೃದ್ಧಿಕೊಳ್ಳಿ ಎಂದು ತಿಳಿಸಿದ್ದಾರೆ.

 

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ