NEWSಸಂಸ್ಕೃತಿಸಿನಿಪಥ

ಇಂದು ಚಿರಂಜೀವಿ ಸರ್ಜಾರ ಪುಣ್ಯತಿಥಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಯುವನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಇಂದಿಗೆ ಹನ್ನೊಂದು ದಿನ.ಹಾಗಾಗಿ ಪುಣ್ಯತಿಥಿ ಕಾರ್ಯವನ್ನು ಕನಕಪುರ ರಸ್ತೆಯ ಬೃಂದಾವನ ಫಾರಂ ಹೌಸ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ನೆರವೇರಿಸಲಾಗುತ್ತಿದೆ.

ಸರ್ಜಾ ಮತ್ತು ಮೇಘನಾ ರಾಜ್ ಕುಟುಂಬ ಸದಸ್ಯರು, ಅವರ ಆಪ್ತರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ನಮ್ಮ ಕುಟುಂಬದಲ್ಲಿ ಇಂಥಾದ್ದೊಂದು ಸಂದರ್ಭ ಬರುತ್ತೆ ಎಂದು ನಾವು ಕನಸಿನಲ್ಲೂ ಅಂದುಕೊಂಡಿರಲಿಲ್ಲ ಎಂದಿರುವ ಧ್ರುವ ಸರ್ಜಾ ಪುಣ್ಯತಿಥಿ ಕಾರ್ಯಕ್ಕೆ ಮಾಧ್ಯಮದವರಿಗೂ ಆಹ್ವಾನ ನೀಡಿದ್ದಾರೆ. ಆದರೆ ಇದು ನಮ್ಮ ಖಾಸಗಿ ಕಾರ್ಯವಾಗಿರುವುದರಿಂದ ಕ್ಯಾಮರಾಗಳನ್ನು ತರಬೇಡಿ ಎಂದು ಮನವಿ ಮಾಡಿದ್ದಾರೆ.

ಇನ್ನು ಭವ್ಯ ಮಂಟಪ ನಿರ್ಮಿಸಲು ಧ್ರುವ ಸರ್ಜಾ ಈಗಾಗಲೇ ಚಿರು ಸರ್ಜಾ ಸಮಾಧಿ ಸ್ಥಳದಲ್ಲಿ ಸಣ್ಣದೊಂದು ಮಂಟಪ ನಿರ್ಮಿಸಿದ್ದಾರೆ. ಅದೇ ಸ್ಥಳದಲ್ಲಿ ಭವ್ಯವಾದ ಮಂಟಪವನ್ನು ಕಟ್ಟುವ ಇರಾದೆ ಧ್ರುವ ಸರ್ಜಾ ಅವರಿಗಿದೆ.

ಕೆಲವು ದಿನಗಳ ಹಿಂದಷ್ಟೆ ರಾಘವೇಂದ್ರ ರಾಜ್‌ಕುಮಾರ್ ಚಿರು ಸರ್ಜಾ ಮನೆಗೆ ಭೇಟಿ ನೀಡಿ ಧೈರ್ಯತುಂಬಿದರು. ಜತೆಗೆ ಮೇಘನಾ ರಾಜ್ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು