NEWSನಮ್ಮಜಿಲ್ಲೆಬೆಂಗಳೂರು

ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಇ-ಖಾತಾ ಪಡೆಯುವ ಸಲುವಾಗಿ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆಯಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಂದ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಿ ಎಂದು ಹೇಳಿದರು.

ಕಂದಯಾ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ಮಾತನಾಡಿ, ಇ-ಖಾತಾ ನೀಡುವ ವಿಚಾರವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂತಿಮ ಇ-ಖಾತಾ ಪಡೆಯಲು ಸುಮಾರು 67 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 61 ಸಾವಿರಕ್ಕೂ ಹೆಚ್ಚು ಇ-ಖಾತಾಗಳನ್ನು ವಿತರಿಸಲಾಗಿದೆ. ಪ್ರತಿನಿತ್ಯ ಬರುವ ಅರ್ಜಿಗಳನ್ನು ನಿಗದಿತ ಸಮಯದೊಳಗಾಗಿ ವಿಲೇವಾರಿ ಮಾಡಿ ನಾಗರೀಕರಿಗೆ ಇ-ಖಾತ ಸಿಗುವಂತೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಆಸ್ತಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮವಹಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಸುಸ್ತಿದಾರರಿಂದ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವವರ ಪಟ್ಟಿ ಮಾಡಿಕೊಳ್ಳಬೇಕು. ಅನಂತರ ಪಟ್ಟಿಯ ಅನುಸಾರ ವಾಣಿಜ್ಯ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ನಾಗರೀಕರಿಂದ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಹಾಯ 2.0, ಐಪಿಜಿಆರ್‌ಎಸ್, ಸಾಮಾಜಿಕ ಜಾಲತಾಣ ಸೇರಿದಂತೆ ಇನ್ನಿತರೆ ಕಡೆಗಳಿಂದ ನಾಗರೀಕರಿಂದ ಬರುವ ದೂರುಗಳನ್ನು ಆದ್ಯತೆ ಮೇರೆಗೆ ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಬೇಕೆಂದು ಹೇಳಿದರು.

ಈ ವೇಳೆ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರು, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ