NEWSಕೃಷಿ

ಉಡುಪಿಯಲ್ಲಿ ನೋಡಲ್ ಅಧಿಕಾರಿಗಳ ನೇಮಕ

ಚಿಲ್ಲರೆ ವ್ಯಾಪಾರ ಸರಬರಾಜು ಪ್ರಕ್ರಿಯೆಗಾಗಿ ನೇಮಕ l ಡಿಸಿ ಜಗದೀಶ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕೋವಿಡ್ -19 ಸಗಟು ಮತ್ತು ಚಿಲ್ಲರೆ ವ್ಯಾಪಾರದ ಸರಬರಾಜು ಪ್ರಕ್ರಿಯೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ   ಜನರಸಂಚಾರಿಸುವುದನ್ನು ನಿರ್ಬಂಧಿಸಲಾಗಿದೆ. ಇದನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ.

ಜನರಿಗೆ  ಅಗತ್ಯವಿರುವ ದಿನಸಿ ಮತ್ತಿತರ ಅವಶ್ಯಕ ಸಾಮಗ್ರಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ  ಸಾಮಾಜಿಕ ಅಂತರ ಪಾಲಿಸಿ ಖರೀದಿಸಲು ಅವಕಾಶವನ್ನು ನೀಡಿ ಪ್ರತಿದಿನ ಬೆಳಗ್ಗೆ 7 ರಿಂದ 11 ರವರೆಗೆ  ಸಮಯ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.

ಜಿಲ್ಲೆಯ ಸಾರ್ವಜನಿಕರ ದೈನಂದಿನ ಬಳಕೆಗೆ ಅವಶ್ಯಕವಿರುವ  ನಿತ್ಯದ ಆಹಾರ ಪದಾರ್ಥಗಳಾದ ಹಾಲು, ಪಡಿತರ ದವಸ ಧಾನ್ಯಗಳು, ಹಣ್ಣು ಮತ್ತು ತರಕಾರಿ ಹಾಗೂ ಇತರೆ ಅವಶ್ಯಕ ಸಾಮಗ್ರಿಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಾರ್ವಜನಿಕರಿಗೆ ಸಮರ್ಪಕವಾಗಿ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಅಗತ್ಯ ವಸ್ತುಗಳ ದಾಸ್ತಾನು ಶೇಖರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಮತ್ತು ದಿನನಿತ್ಯದ ಆಹಾರ ಸಾಮಗ್ರಿಗಳ ಪೂರೈಕೆಯ ಸಂಬಂಧ ಅಗತ್ಯ ಕ್ರಮವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ನೋಡಲ್ ಅಧಿಕಾರಿಗಳ ವಿವರ

ರಾಜು .ಕೆ ಸಹಾಯಕ  ಕಮೀಷನರ್ ಕುಂದಾಪುರ ಮೊ.ಸಂ.8762823984.

ಭುವನೇಶ್ವರಿ ,ಉಪ ನಿರ್ದೇಶಕರು ,ತೋmಗಾರಿಕೆ ಇಲಾಖೆ ಉಡುಪಿ ಮೊ.ಸಂ 9448999225.

ಗಜೇಂದ್ರ .ವಿ ಸಹಾಯಕ ನಿಯಂತ್ರಕರು  ಕಾನೂನು ಮಾಪನ ಶಾಸ್ತ್ರ ಉಡುಪಿ ಮೊ.ಸಂ. 9845154263.

ಗೋಪಾಲ್ ಕಾಕನೂರ್, ಕಾರ್ಯದರ್ಶಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕಾರ್ಕಳ, ಮೊ.ಸಂ 9886925800.

ಗಾಯತ್ರಿ , ಕಾರ್ಯದರ್ಶಿ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಉಡುಪಿ ಮೊ.ಸಂ.9900599335.

ದೀಪ್ತಿ , ಕಾರ್ಯದರ್ಶಿ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕುಂದಾಪುರ, 9663858151 ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಿ  ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ