CrimeNEWSನಮ್ಮಜಿಲ್ಲೆ

ಉದ್ಯೋಗದ ಆಸೆ- ಆನ್‍ಲೈನ್‍ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೀದರ್: ಉದ್ಯೋಗಕ್ಕಾಗಿ ಆನ್‍ಲೈನ್‍ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಖಾಸಗಿ ಕಾಲೇಜಿನ ಉಪನ್ಯಾಸಕಿ ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡರು. ಆನ್‍ಲೈನ್‍ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆನ್‍ಲೈನ್‍ನಲ್ಲಿ ಮನೆಯಲ್ಲೇ ಕುಳಿತು ಉದ್ಯಮ ಮಾಡಲು ಹಣ ಹೂಡಿಕೆ ಮಾಡಿ ಎಂದ ವ್ಯಕ್ತಿಯನ್ನು ನಂಬಿದ ಉಪನ್ಯಾಸಕಿ ಬರೋಬ್ಬರಿ 2.50 ಲಕ್ಷ ರೂ.ವರೆಗೆ ಹಣ ಕಳುಹಿಸಿದ್ದಾರೆ. ಬಳಿಕ ಇನ್ನೂ 82 ಸಾವಿರ ರೂಪಾಯಿ ಕಳಿಸಿದರೆ ಉದ್ಯೋಗದ ಜೊತೆಗೆ ಹೂಡಿಕೆ ಮಾಡಿದ ಎಲ್ಲ ಹಣವನ್ನು ವಾಪಸ್ ಕೊಡುತ್ತೇನೆ ಎಂದು ವಂಚಕ ತಿಳಿಸಿದ್ದಾನೆ.

ಇದರಿಂದ ಭಯಗೊಂಡ ಮತ್ತು ಮನೆಯವರ ಗಮನಕ್ಕೆ ತಾರದೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಭೀತಿಯಿಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹಣ ಹೂಡಿಕೆ ಮಾಡಿದ್ದ ಏಜೆನ್ಸಿ ಬಗ್ಗೆ ಡೆತ್‍ನೋಟ್‍ನಲ್ಲಿ ಉಲ್ಲೇಖ ಮಾಡಿದ್ದಾರೆ ಉಪನ್ಯಾಸಕಿ.

ಉಪನ್ಯಾಸಕಿ ಆರತಿ ಕನಾಟೆ ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆ ಸಂಬಂಧ ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ