NEWSನಮ್ಮಜಿಲ್ಲೆನಮ್ಮರಾಜ್ಯ

ಎಚ್.ಡಿ.ಕೋಟೆಯಲ್ಲಿ ಬೀದಿ ನಾಯಿಗಳ ಕಾಟದಿಂದ ಬೇಸತ್ತಿದ್ದ ಜನರಿಗೆ ಈಗ ಕೋತಿಗಳ ಹಾವಳಿ

ವಿಜಯಪಥ ಸಮಗ್ರ ಸುದ್ದಿ

ಎಚ್.ಡಿ.ಕೋಟೆ: ಪಟ್ಟಣದಲ್ಲಿ ಬೀದಿನಾಯಿ, ಕೋತಿಗಳ ಹಾವಳಿಯಿಂದ ಜನ ಹೈರಾಣರಾಗುತ್ತಿದ್ದಾರೆ. ಕೆಲದಿನದಿಂದ ಬೀದಿ ನಾಯಿಗಳ ಕಾಟದಿಂದ ಬೇಸತ್ತಿದ್ದವರು, ಈಗ ಕೋತಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್ಲಿ ಓಡಾಡುವುದಕ್ಕೂ ಹೆದರುವಂತಾಗಿದೆ.

ಆಗಾಗ್ಗೆ ಪಟ್ಟಣದೊಳಗೆ ನುಗ್ಗುವ ಕೋತಿಗಳು ಜನರಿಗೆ ಹಿಂಸೆ ನೀಡುತ್ತಿವೆ. ಮನೆಗೆ ನುಗ್ಗಿ ಸಿಕ್ಕಿದ್ದನ್ನು ಹೊತ್ತೊಯ್ಯುವುದಲ್ಲದೆ, ಸುತ್ತ ಮುತ್ತ ಬೆಳೆದ ಬೆಳೆಗಳನ್ನು ಹಾಳು ಮಾಡುತ್ತಿವೆ. ಒಂದೆಡೆ ನಾಯಿಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇವುಗಳಿಂದ ಶಾಲೆಗೆ ತೆರಳುವ ಮಕ್ಕಳಿಂದ ಹಿಡಿದು ವಯೋವೃದ್ಧರು ಭಯಪಡುವಂತಾಗಿದೆ.

ಇದೊಷ್ಟೇ ಅಲ್ಲದೆ ದ್ವಿಚಕ್ರ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುವ ನಾಯಿಗಳು ಅಪಘಾತಕ್ಕೂ ಕಾರಣವಾಗುತ್ತಿವೆ. ಒಮ್ಮೆಗೆ ಬೈಕ್ ಸವಾರರ ಮೇಲೆ ದಾಳಿ ಮಾಡುತ್ತಿದ್ದು, ಇದರಿಂದ ನಿಯಂತ್ರಣ ತಪ್ಪಿ ಬಿದ್ದು ಸವಾರರು ಪೆಟ್ಟು ಮಾಡಿಕೊಳ್ಳುತ್ತಿದ್ದಾರೆ.

ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತನ್ನ ಮರಿಗಳ ಸಹಿತ ಹಿಂಡು ಹಿಂಡಾಗಿ ಬೀಡು ಬೀಡು ಬಿಡುವ ಕೋತಿಗಳು ಮನೆಯ ಗೃಹಣಿಯರನ್ನು ಇನ್ನಿಲ್ಲದಂತೆ ಕಾಡುತ್ತಿವೆ. ಕೋತಿಗಳ ಹಾವಳಿ ಎಷ್ಟರ ಮಟ್ಟಿಗೆ ಮಿತಿಮಿರಿದೆ ಎಂದರೆ ಮನೆಗಳ ಹೆಂಚುಗಳನ್ನು ತೆಗೆದು ಕೆಳಗೆ ಬಿಸಾಡಿ, ಒಡೆದು ಹಾಕುವುದಲ್ಲದೆ, ಮನೆಯ ಒಳಹೊಕ್ಕು ಕೆಲ ಉಪಕರಣಗಳನ್ನು ಕಿತ್ತು ನಾಶ ಮಾಡುತ್ತಿವೆ.

ಇನ್ನು ಆಡುಗೆ ಮನೆಯಲ್ಲಿ ಸಿಕ್ಕ ಸಿಕ್ಕ ಆಹಾರ ಸಾಮಾಗ್ರಿ, ತರಕಾರಿ, ದಿನಸಿ ಪದಾರ್ಥಗಳನ್ನು ತಿಂದು ಚೆಲ್ಲಾಡಿ ನಾಶಪಡಿಸುವುದರ ಜತೆಗೆ ಮನೆಯಲ್ಲಿರುವ ಹಣ್ಣು ಹಂಪಲು ಮತ್ತು ತಿಂಡಿ ತಿನಿಸುಗಳನ್ನು ಹೊತ್ತೊಯ್ಯುತ್ತಿವೆ.

ಮನೆ ಹಿಂದೆ ಮುಂದೆ ಇರುವ ತೆಂಗಿನ ಮರದ ಎಳೆನೀರನ್ನು ಕಿತ್ತು ಕುಡಿದು ಬಿಸಾಡುತ್ತಿದ್ದು, ಕೋತಿಗಳ ಮೀತಿ ಮೀರಿದ ಹಾವಳಿಯಿಂದಾಗಿ ಇಲ್ಲಿನ ನಿವಾಸಿಗಳು ಮನೆಯಲ್ಲಿ ಒಂಟಿಯಾಗಿ ಇರಲು ಹೆದರುವಂತಾಗಿದೆ. ದಿನನಿತ್ಯ ವಿವಿಧ ಕೆಲಸ ಕಾರ್ಯಗಳ ಈಡೇರಿಕೆಗೆ ಬರುವ ತಾಲೂಕಿನ ಜನರು ಕೋತಿಗಳ ಹಿಂಡನ್ನು ನೋಡಿ ಹೌಹಾರುತ್ತಿದ್ದಾರೆ. ಬೀದಿ ನಾಯಿಗಳ ಹಾವಳಿ ಹಾಗೂ ಕೋತಿಗಳ ಉಪಟಳಕ್ಕೆ ಮುಕ್ತಿ ನೀಡುವುದು ಅಗತ್ಯವಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ