NEWS

ಎಚ್‌ಐವಿ ನಿಯಂತ್ರಣ ಔಷಧದಿಂದ ಕೊರೊನಾ ರೋಗಿ ಗುಣಮುಖ

ಎರ್ನಾಕುಲಂ ವೈದ್ಯ ಕಾಲೇಜಿನ ಪ್ರಾಂಶುಪಾಲ ಡಾ. ಮ್ಯಾಥ್ಯೂ ನೇತೃತ್ವದಲ್ಲಿ ಚಿಕಿತ್ಸೆ

ವಿಜಯಪಥ ಸಮಗ್ರ ಸುದ್ದಿ

ಕೇರಳ: ತಿರುವನಂತಪುರಂನಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿದ್ದಾನೆ ಎಂದು ವರದಿಯಾಗಿದೆ.

ಕೇರಳಕ್ಕೆ ಬಂದಿದ್ದ ಇಂಗ್ಲೆಂಡ್‌ನ ವ್ಯಕ್ತಿಗೆ ಎಚ್‌ಐವಿ ನಿಯಂತ್ರಣಕ್ಕೆ ನೀಡುವ ಲೊಪಿನವಿರ್‌ ಮತ್ತು ರಿಟೊನವಿರ್ (lopinavir and ritonavir) ಸಂಯೋಜನೆಯ ಔಷಧವನ್ನು ಮಾ.20ರಂದು ನೀಡಲಾಗಿತ್ತು. ಅದನ್ನು ನೀಡಿದ ಮೂರು ದಿನಗಳ ಬಳಿಕೆ ಆತನ ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು ಲ್ಯಾಬ್‌ ವರದಿಯಲ್ಲಿ ಕೊರೊನಾ ಸೋಂಕು ನೆಗೆಟಿವ್‌ ಎಂದು ಬಂದಿದೆ ಎಂದು ಎರ್ನಾಕುಲಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಥಾಮಸ್‌ ಮ್ಯಾಥ್ಯೂ ತಿಳಿಸಿದ್ದಾರೆ.

ಡಾ.ಥಾಮಸ್‌ ಮ್ಯಾಥ್ಯೂ ನೇತೃತ್ವದಲ್ಲಿ ಕೊರೊನಾ ಸೋಂಕಿತನಿಗೆ ಎಚ್‌ಐವಿ ನಿರೋಧಕ ಔಷಧಗಳ ಸಂಯೋಜಿಸಿ ಚಿಕಿತ್ಸೆ ನೀಡಲಾಗಿತ್ತು.  ಚಿಕಿತ್ಸೆಗೆ ಒಳಗಾಗಿದ್ದ ಆತ ಕೇವಲ ಮೂರೇ ದಿನದಲ್ಲೇ ಗುಣಮುಖನಾಗಿದ್ದಾನೆ. ಇದು ವೈದ್ಯಕೀಯ ಲೋಕಕ್ಕೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ಸೋಂಕಿತನಿಗೆ ಎಚ್‌ಐವಿ ನಿಯಂತ್ರಣ ಔಷಧ ನೀಡುವುದಕ್ಕೂ ಮುನ್ನ ವೈದ್ಯರು ಕೇರಳದ ರಾಜ್ಯ ವೈದ್ಯಕೀಯ ಮಂಡಳಿ ಹಾಗೂ ಸೋಂಕಿತ ವ್ಯಕ್ತಿಯ ಅನುಮತಿ ಪಡೆದಿದ್ದರು. ಕೇರಳದಲ್ಲಿ ಈ ಚಿಕಿತ್ಸೆಯನ್ನು ಮೊದಲ ಬಾರಿಗೆ ಬಳಸಲಾಗಿದ್ದು, ಆರಂಭದಲ್ಲಿಯೇ ದೊಡ್ಡ ಯಶಸ್ಸನ್ನು ಪಡೆದಂತ್ತಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ರೋಗಿಗಳಿಗೂ ಇದೇ ಚಿಕಿತ್ಸೆ ವಿಸ್ತರಿಸುವ ಯೋಚನೆಯಲ್ಲಿ ವೈದ್ಯರು ಇದ್ದಾರೆ ಎಂದು ಹೇಳಲಾಗಿದೆ.
ಈ ಮೊದಲು  ಇದೇ ರೀತಿ ನ್ಯೂಡೆಲ್ಲಿ ಮತ್ತು ಜೈಪುರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿತ್ತು.  ಎಚ್‌ಐವಿ ಔಷಧದ ಜತೆಗೆ ಮಲೇರಿಯಾ ರೋಗಕ್ಕೆ ಬಳಸುವ ಔಷಧವನ್ನು  ಪ್ರಯೋಗಮಾಡಲಾಗಿತ್ತು. ಆ ಮೂಲಕ ಅಧ್ಯಯನ ನಡೆಸಿದ್ದ ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿರುವ ಕ್ವೀನ್ಸ್‌ಲ್ಯಾಂಡ್‌ ವಿಶ್ವವಿದ್ಯಾಲಯದ ಸೋಂಕು ರೋಗಗಳ ತಜ್ಞರ ಗುಂಪು ಎಚ್‌ಐವಿ ಹಾಗೂ ಮಲೇರಿಯಾ ರೋಗದ ಔಷಧಗಳಿಂದ ಕೊರೊನಾ ವೈರಸ್‌ ನಿಯಂತ್ರಣ ಸಾಧ್ಯ ಎಂದು ಹೇಳಿತ್ತು. ಅಷ್ಟೇ ಅಲ್ಲ ಈ ರೀತಿಯ ಸಂಯೋಜಿತ ಚಿಕಿತ್ಸೆ ನೀಡುವುದರಿಂದ ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ