CrimeNEWSನಮ್ಮರಾಜ್ಯಬೆಂಗಳೂರು

ಎರಡು ಟನ್‌ ಟೊಮ್ಯಾಟೋ ತುಂಬಿದ್ದ ಬೊಲೆರೋವನ್ನೇ ಕದ್ದು ಖದೀಮರು ಪರಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿನ್ನದ ಬೆಲೆ ಎನಿಸಿಕೊಂಡಿರುವ ಟೊಮ್ಯಾಟೋವನ್ನು ಹೊತ್ತಿದ್ದ ಬೊಲೆರೋ ವಾಹನವನ್ನೇ ಖದೀಮರು ಎಗರಿಸಿರುವ ಘಟನೆ ನಗರದಲ್ಲಿ ನಡೆದಿದೆ.

ರೈತರು ಚಿತ್ರದುರ್ಗದಿಂದ ಟೊಮ್ಯಾಟೋ ಲೋಡ್ ಅನ್ನು ಬೆಂಗಳೂರಿನ ಆರ್‌ಎಂಸಿ ಯಾರ್ಡ್‌ಗೆ ಬಂದು ನಿಲ್ಲಿಸುವ ವೇಳೆ ಘಟನೆ ನಡೆದಿದೆ.

ಬೊಲೆರೋ ವಾಹನ ಸಮೇತ 2 ಟನ್ ಟೊಮ್ಯಾಟೋ ಎಗರಿಸಲು ಹೊಂಚುಹಾಕಿಕೊಂಡು ಹಿಂಬಾಲಿಸಿಕೊಂಡು ಬಂದ ಖದೀಮರು ಈ ಕೃತ್ಯ ಎಸಗಿದ್ದಾರೆ.

250 ಕ್ಕೂ ಹೆಚ್ಚು ಟಪಮ್ಯಾಟೋ ಟ್ರೇ ಇದ್ದ ಬೊಲೆರೋ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹೈಜಾಕ್ ಮಾಡಿದ್ದಾರೆ. ಟೊಮ್ಯಾಟೋ ತುಂಬಿದ್ದ ಗಾಡಿ ಫಾಲೋ ಮಾಡಿ ಬಂದ ಖಧೀಮರು, ಆರ್‌ಎಂಸಿ ಯಾರ್ಡ್ ಬಳಿ ಅಡ್ಡ ಹಾಕಿ ರೈತನಿಗೆ ಅವಾಜ್ ಕೂಡ ಹಾಕಿದ್ದರು. ಗಾಡಿ ಟಚ್ ಆಗಿದೆ ಎಂದು ನಾಟಕ ಮಾಡಿ ಡ್ರೈವರ್‌ಗೂ ಥಳಿಸಿದ್ದರು.

ಆ ಬಳಿಕ ರೈತನ ಮೇಲೂ ಹಲ್ಲೆ ಮಾಡಿ ಹಣ ಕೊಡು ಎಂದು ಹೆದರಿಸಿದ್ದರು. ಹಣ ಇಲ್ಲ ಎಂದಾಗ ಮೊಬೈಲ್‌ ಮೂಲಕ ಬ್ಯಾಂಕ್‌ ಖಾತೆಯಲ್ಲಿದ್ದ ಹಣವನ್ನು ವರ್ಗಾಯಿಸಿಕೊಂಡು ಟೊಮ್ಯಾಟೋ ಗಾಡಿಯಲ್ಲಿ ರೈತನನ್ನು ಕೂರಿಸಿಕೊಂಡು ಹೈಜಾಕ್ ಮಾಡಿದ್ದಾರೆ.

ನಂತರ ಚಿಕ್ಕಜಾಲ ಬಳಿ ಡ್ರೈವರ್‌ನನ್ನು ಬಿಟ್ಟು ಟೊಮ್ಯಾಟೋ ತುಂಬಿದ್ದ ವಾಹನ ಸಮೇತ ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಟೊಮ್ಯಾಟೋಗೆ ಡಿಮ್ಯಾಂಡ್‌ ಜಾಸ್ತಿಯಾಗಿದ್ದ ಬೆಲೆ ಗಗನಕ್ಕೇರಿದ ಬೆನ್ನಲ್ಲೇ ತೊಮ್ಯಾಟೋ ಬೆಳೆಗಾರ ರೈತರಲ್ಲಿ ಕಳ್ಳರ ಆತಂಕ ಶುರುವಾಗಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ