NEWSಶಿಕ್ಷಣ-

ಎಲ್ಲಾ ಶಿಕ್ಷಕರಿಗೂ ಬಿಇಒ ಕಚೇರಿಗಳಲ್ಲಿ ವ್ಯಾಕ್ಸಿನ್ ವ್ಯವಸ್ಥೆ : ಸಚಿವ ನಾಗೇಶ್

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಆಗಸ್ಟ್ 23 ರಿಂದ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳು ಆರಂಭವಾಗುವ ಹಿನ್ನೆಲೆ ಆ.23ರ ಒಳಗೆ ಎಲ್ಲಾ ಶಿಕ್ಷಕರಿಗೆ ಬಿಇಒ ಕಚೇರಿಗಳಲ್ಲಿ ಕೊರೊನಾ ನಿಗ್ರಹ ವ್ಯಾಕ್ಸಿನ್ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯ ಪಡೆದುಕೊಂಡು ಶಾಲಾ ಆರಂಭ ಮಾಡಲಾಗುತ್ತಿದೆ. ಕೊರೊನಾ ಮುಂದಿನ ದಿನಗಳಲ್ಲಿ ಜೀವನದ ಒಂದು ಭಾಗ ಆಗುತ್ತದೆ ಮತ್ತು ಅದರ ಜೊತೆಗೆ ಬದುಕು ಕಲಿಯಬೇಕು ಎಂದು ಅಭಿಪ್ರಾಯ ಪಟ್ಟರು.

ಕೊರೊನಾದಿಂದಾಗಿ ಮಕ್ಕಳ ಮೇಲಿನ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಕಳೆದ ಒಂದೂವರೆ ವರ್ಷದಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ನಿಯಂತ್ರಣಕ್ಕೆ ಬಂದಿದ್ದು, ರಾಜ್ಯದಲ್ಲಿ ಇದೀಗ ಮತ್ತೆ ಶಾಲೆಗಳನ್ನು ಪುನಾರಂಭಿಸುವುದಾಗಿ ತಿಳಿಸಿದರು.

ಕಳೆದ ಒಂದೂವರೆ ವರ್ಷದಿಂದ ಮಕ್ಕಳ ಶಿಕ್ಷಣ ಹೋಗಿರುವುದು ಎಲ್ಲರಿಗೂ ಗೊತ್ತಿದೆ. ಅಲ್ಲದೇ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿತ್ತು. ಹಾಗಾಗಿ ತಜ್ಞರ ಅಭಿಪ್ರಾಯ ಪಡೆದು 9,10,11,12 ನೇ ತರಗತಿಗಳು ಪ್ರಾರಂಭ ಮಾಡುತ್ತಿದ್ದೇವೆ. ಹಾಗಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ ಎಂದು ವಿವರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು