NEWSನಮ್ಮಜಿಲ್ಲೆ

ಏಳು ನ್ಯಾಯಬೆಲೆ ಅಂಗಡಿಗಳ ಅಮಾನತು

ಮುಕ್ತಮಾರುಕಟ್ಟೆ ಅಂಗಡಿಗಳ ವಿರುದ್ಧವೂ ಕ್ರಮ

ವಿಜಯಪಥ ಸಮಗ್ರ ಸುದ್ದಿ

 ಮೈಸೂರು: ಕುವೆಂಪು ನಗರದಲ್ಲಿರುವ ಚೇತನ ನ್ಯಾಯಬೆಲೆ ಅಂಗಡಿ, ಎನ್.ಆರ್.ಮೊಹಲ್ಲದಲ್ಲಿರುವ ಗಾಂಧಿನಗರ ಸಿ.ಸಿ.ಎಸ್ ನ್ಯಾಯಬೆಲೆ ಅಂಗಡಿ, ಚಾಮರಾಜ ಮೊಹಲ್ಲದ ಟಿ.ಕೆ.ಲೇಔಟ್‍ನಲ್ಲಿರುವ ಶ್ರೀಲಕ್ಷ್ಮೀ ನ್ಯಾಯಬೆಲೆ ಅಂಗಡಿಗಳನ್ನು ಅಮಾನತಿನಲ್ಲಿಟ್ಟು ವಿಚಾರಣೆಗೆ ಕ್ರಮವಹಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 7 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಂಬಂಧ ಲಾಕ್‍ಡೌನ್ ಆಗಿರುವ ಕಾರಣ ಪಡಿತರ ಚೀಟಿದಾರರ ಆಹಾರ ಭದ್ರತೆಗೆ ದಕ್ಕೆಯಾಗದಂತೆ ಕ್ರಮವಹಿಸುವ ಹಿನ್ನೆಲೆಯಲ್ಲಿ ಏಪ್ರಿಲ್ ಮತ್ತು ಮೇ-ಏಪ್ರಿಲ್ ಮಾಹೆಯಲ್ಲಿ ಒಂದೇ ಬಾರಿಗೆ ವಿತರಣೆ ಮಾಡಲು ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಹಂಚುವಂತೆ ಮತ್ತು ನ್ಯಾಯಬೆಲೆ ಅಂಗಡಿಯವರು ಪಡಿತರ ವಿತರಣೆಯಲ್ಲಿ ಯಾವುದೇ ಲೋಪದೋಷವಾಗದಂತೆ ಕ್ರಮವಹಿಸಲು ಸೂಚಿಸಲಾಗಿತ್ತು.

ಈ ಕ್ರಮಗಳ ಬಗ್ಗೆ ಜಿಲ್ಲೆಯ ಕಾರ್ಯನಿರ್ವಾಹಕ ಸಿಬ್ಬಂದಿ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ವೇಳೆ ಲೋಪದೋಷಗಳು ಕಂಡು ಬಂದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮುಕ್ತಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಕೃತಕ ಅಭಾವ ಸೃಷ್ಟಿಯಾಗದಂತೆ ಮತ್ತು ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟವಾಗದಂತೆ ನೋಡಿಕೊಳ್ಳುವ ಸಲುವಾಗಿ ಮುಕ್ತ ಮಾರುಕಟ್ಟೆಯ ಸಗಟು ಮತ್ತು ಚಿಲ್ಲರೆ ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ದರಫಲಕ ನಿರ್ವಹಿರುವುದು, ಲೆಕ್ಕಪತ್ರ ನಿರ್ವಹಣೆ ಮಾಡಿರುವುದಿಲ್ಲ ಮತ್ತು ವಹಿವಾಟಿನ ಬಗ್ಗೆ ಸರಿಯಾದ ಬಿಲ್ಲುಗಳನ್ನು ನಿರ್ವಹಿಸಿರುವುದಿಲ್ಲದ ಕಾರಣ ಬಂಡಿಪಾಳ್ಯದ ಎ.ಪಿ.ಎಂ.ಸಿ ಯಾರ್ಡ್‍ನ ಆಕಳು ಟ್ರೇಡರ್ಸ್ ಹಾಗೂ ಮುರಾರಿ ಟ್ರೇಡರ್ಸ್ ವಿರುದ್ಧ  ತನಿಖೆ ನಡೆಸಿ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ