NEWSನಮ್ಮರಾಜ್ಯ

ಏ.24ರ ಸಂಜೆ ವೇಳೆಗೆ 29 ಕೊರೊನಾ ಹೊಸ ಸೋಂಕಿತರು ಪತ್ತೆ

ರಾಜ್ಯದಲ್ಲಿ 474ಕ್ಕೆ ಏರಿದ ಕೋವಿಡ್‌-19 ಸೋಂಕಿತರು l ಬೆಂಗಳೂರಿನಲ್ಲಿ ಇಂದು19 ಮಂದಿಯಲ್ಲಿ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 29 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ ಆಗಿದೆ.

 ರಾಜ್ಯದ ರಾಜಧಾನಿಯಲ್ಲಿ ಇಂದು ಒಂದೇ ದಿನ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಬೆಳಗ್ಗೆ 11 ಮಂದಿಗೆ ಇತ್ತು ಸಂಜೆ ವೇಳೆಗೆ ಮತ್ತೆ 8 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 120ಕ್ಕೆ ಏರಿಕೆ ಆಗಿದೆ.

ಬೆಂಗಳೂರಿನ 19, ಬೆಳಗಾವಿಯಲ್ಲಿ 2, ಬಾಗಲಕೋಟೆಯಲ್ಲಿ ಎರಡು, ವಿಜಯಪುರದಲ್ಲಿ 2, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರದಲ್ಲೂ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.

ಪಾದರಾಯನಪುರದಲ್ಲಿ ಇತ್ತೀಚೆಗೆ ಗಲಾಟೆ ಮಾಡಿದ್ದ 121 ಮಂದಿಯನ್ನು ರಾಮನಗರದ ಜೈಲಿನಲ್ಲಿ ಇರಿಸಲಾಗಿತ್ತು. ಅವರಲ್ಲಿ 5 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಜತೆಗೆ ಬೆಂಗಳೂರಿನ 19 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಬೆಂಗಳೂರಿನ  ನಿವಾಸಿಗಳಲ್ಲಿ ಇಂದು ತುಸು ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 474ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿರಿ ಬೆಂಗಳೂರಿನ 11ಮಂದಿ ಸೇರಿ ಇಂದು 18 ಜನರಿಗೆ ಕೊರೊನಾ ಸೋಂಕು

ದೇಶದಲ್ಲಿ 23088ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 23088 , ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 718 ಮಂದಿ ಮೃತಪಟ್ಟಿದ್ದಾರೆ. 4,258 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 27,45,469  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,91,791 ಜನರು ಮೃತಪಟ್ಟಿದ್ದಾರೆ. 7,55,462 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ