NEWSನಮ್ಮಜಿಲ್ಲೆಸಂಸ್ಕೃತಿ

ಐತಿಹಾಸಿಕ ತೊಣ್ಣೂರು ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಸಿ.ಎಸ್.ಪುಟ್ಟರಾಜು

ವಿಜಯಪಥ ಸಮಗ್ರ ಸುದ್ದಿ
  • ತೊಣ್ಣೂರು ಕೆರೆಗೆ ಕೆ.ಆರ್.ಎಸ್. ಮಾದರಿ ಸ್ವಯಂಚಾಲಿತ ಬಾಗಿಲು ನಿರ್ಮಾಣ

ಪಾಂಡವಪುರ : ಇತಿಹಾಸ ಪ್ರಸಿದ್ಧ ತೊಣ್ಣೂರು ಕೆರೆ ತುಂಬಿದಾಗ ನೀರು ಹೊರ ಹೋಗಲು ಕೆ.ಆರ್.ಎಸ್. ಮಾದರಿ ಸ್ವಯಂ ಚಾಲಿತ ಬಾಗಿಲು ನಿರ್ಮಿಸಲಾಗುವುದು ಎಂದು ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು.

ತುಂಬಿ ತುಳುಕುತ್ತಿರುವ ತಾಲೂಕಿನ ತೊಣ್ಣೂರು ಗ್ರಾಮದ ಇತಿಹಾಸ ಪ್ರಸಿದ್ಧ ಕೆರೆಗೆ ಬಾಗಿನ ಅರ್ಪಿಸಿ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚೆಗೆ ಬಿದ್ದ ನಿರಂತರ ಮಳೆಯಿಂದ ತೊಣ್ಣೂರು ಕೆರೆಯು ತುಂಬಿ ಕೋಡಿ ಬಿದ್ದಿತ್ತು. ಈ ವೇಳೆ ನೀರು ಯಥೇಚ್ಛವಾಗಿ ಹರಿದ ಕಾರಣ ಸಮೀಪದ ಕೃಷಿ ಜಮೀನುಗಳಿಗೆ ಭಾರಿ ಪ್ರಮಾಣದ ಹಾನಿಯುಂಟಾಗಿತ್ತು. ಇದೇ ರೀತಿ ಈ ಹಿಂದೆ ಒಂದೆರಡು ಬಾರಿ ರೈತರಿಗೆ ಅನಾನುಕೂಲ ಉಂಟಾಗಿತ್ತು.

ಇದನ್ನು ಮನಗಂಡು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೆ.ಆರ್.ಎಸ್. ಜಲಾಶಯ ಮಾದರಿಯಲ್ಲಿ ಸ್ವಯಂ ಚಾಲಿತ ಬಾಗಿಲು ನಿರ್ಮಿಸಲಾಗುವುದು. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೆಚ್ಚುವರಿ ನೀರು ಬಂದಾಗ ಬಾಗಿಲು ತಂತಾನೆ ತೆರೆದು ನೀರು ಹೊರಹೋಗುತ್ತದೆ. ಇದರಿಂದ ಕೆರೆಗೆ ಯಾವುದೇ ಅಪಾಯ ಉಂಟಾಗುವುದು ತಪ್ಪುತ್ತದೆ ಎಂದರು.

ಈ ಹಿಂದೆ ಕೆರೆ ಭರ್ತಿಯಾಗಿ ಅಪಾಯದ ಮಟ್ಟ ತಲುಪಿದಾಗ ತಜ್ಞರ ಸಲಹೆಯಂತೆ ನೀರು ಹೊರಕಾಕಲು ವೈಜ್ಞಾನಿಕವಾಗಿ ಪ್ರಯತ್ನ ನಡೆಸಿದಾಗ ಕೆಲವರು ಅಪಪ್ರಚಾರ ಮಾಡಿದರು. 1993 ರಲ್ಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ತೊಣ್ಣೂರು ಕೆರೆಗೆ ಕರೆತಂದು ಕೆರೆ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಿಸಿದ್ದೆ.

ನಂತರವೂ ತೊಣ್ಣೂರು ಕೆರೆಯಿಂದ ಸಮೀಪದ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಮುಂದಾದಾಗ ಆಗಲೂ ಅಪಪ್ರಚಾರ ನಡೆಸಿದರು. ಅಪಪ್ರಚಾರಕ್ಕೆ ಯಾರೂ ಕಿವಿಗೊಡಬಾರದು ಇದರಿಂದ ತಾಲ್ಲೂಕಿನ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.

ಟಿ.ಎಸ್.ಛತ್ರ ಗ್ರಾಪಂ ಅಧ್ಯಕ್ಷೆ ಭಾರತಿ, ಮಾಜಿ ಅಧ್ಯಕ್ಷರಾದ ಪೂಜಾ, ಶೃತಿ, ಎಇಇ ಪುಟ್ಟಮಾಯಿಗೌಡ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ, ತಾಪಂ ಇಒ ಎಸ್.ಎಂ.ಲೋಕೇಶ್ ಮೂರ್ತಿ, ಶಿಕ್ಷಣಾಧಿಕಾರಿ ಲೋಕೇಶ್, ತಾಪಂ ಮಾಜಿ ಸದಸ್ಯ ರಾಜಣ್ಣ ಇನ್ನಿತರರು ಇದ್ದರು.
ವರದಿ: ವಿಶ್ವನಾಥನ್, ಪಾಂಡವಪುರ

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ