Please assign a menu to the primary menu location under menu

NEWSಆರೋಗ್ಯ

ಐಸೋಲೇಶನ್ ವಾರ್ಡ್‍ಗೆ ಸಚಿವ ಶ್ರೀರಾಮುಲು ಭೇಟಿ ಪರಿಶೀಲನೆ

ಚಿಕಿತ್ಸೆ ಪಡೆಯುತ್ತಿರುವವರಿಗೆ ಧೈರ್ಯ ತುಂಬಿದ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ನೀವು ಧೈರ್ಯಕಳ್ಕೊಳ್ಳಬೇಡಿ; ನೀಮಗೇನು ಆಗಿಲ್ಲ. ದೇವರ ದಯೆಯಿಂದ ನಿಮ್ಮದು ನೆಗೆಟಿವ್ ರಿಪೋರ್ಟ್ ಬರುತ್ತದೆ ಅಷ್ಟೇ,ಅಲ್ಲಿಯವರೆಗೆ ಐಸೋಲೇಶನ್ ವಾರ್ಡ್‍ನಲ್ಲಿರಬೇಕು. ನಿಮ್ಮೊಂದಿಗೆ ನಾವಿದ್ದೇವೆ; ತಮಗೆ ಚಿಕಿತ್ಸೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ರೋಗಿಗಳಿಗೆ ಧೈರ್ಯ ತುಂಬಿದರು.

ನಿಮ್ಮನ್ನು ದೂರವಿಟ್ಟಿದ್ದೇವೆ ಎಂದು ಅಂದುಕೊಳ್ಳಬೇಡಿ; ದೇಶ ಹಾಗೂ ಎಲ್ಲರ ಸುರಕ್ಷತೆ ದೃಷ್ಟಿಯಿಂದ ತಮ್ಮನ್ನು ಐಸೋಲೇಶನ್ ವಾರ್ಡ್‍ನಲ್ಲಿಟ್ಟಿದ್ದೇವೆ ಅಷ್ಟೆ ಎಂದು ಹೇಳಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಹಿನ್ನೆಲೆ ಐಸೋಲೇಶನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಕೋವಿಡ್ ಸುರಕ್ಷಾ ಕಿಟ್ ಧರಿಸಿ ಒಳಗಡೆ ತೆರಳಿ ಬೆನ್ನುತಟ್ಟಿ ಅವರಿಗೆ ಧೈರ್ಯ ತುಂಬಿದರು.

ಜಿಲ್ಲಾಶಸ್ತ್ರಚಿಕಿತ್ಸ ಎನ್.ಬಸರೆಡ್ಡಿ ಐಸೋಲೇಶನ್ ವಾರ್ಡ್‍ನಲ್ಲಿ ಎಷ್ಟು ದಿನಗಳಿಂದಿರಿಸಲಾಗಿದೆ ಎಂಬುದು ಸೇರಿದಂತೆ ಕಲ್ಪಿಸಲಾಗುತ್ತಿರುವ ಇನ್ನಿತರ ಚಿಕಿತ್ಸಾ ಕ್ರಮಗಳನ್ನು ವಿವರಿಸಿದರು.

ಶಾಸಕ ಸೋಮಶೇಖರರೆಡ್ಡಿ, ನಾಗೇಂದ್ರ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಇನ್ನೀತರ ವೈದ್ಯಾಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ