NEWSಕ್ರೀಡೆದೇಶ-ವಿದೇಶವಿದೇಶ

ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ: ಕುಸ್ತಿಯಲ್ಲಿ ಪದಕ ಗೆದ್ದ ರವಿ ದಹಿಯಾ

ವಿಜಯಪಥ ಸಮಗ್ರ ಸುದ್ದಿ

ಟೋಕಿಯೋ: ಒಲಿಂಪಿಕ್ಸ್ ಕುಸ್ತಿಯ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 23 ವರ್ಷದ ರವಿ ದಹಿಯಾ ಬೆಳ್ಳಿಯನ್ನು ಗೆದ್ದಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಎರಡನೇ ಬೆಳ್ಳಿ ಪದಕವನ್ನು ಗೆದ್ದಂತಾಗಿದೆ.

ಇಂದು ಚಿನ್ನಕ್ಕಾಗಿ ರವಿ ದಹಿಯಾ ಆರ್‌ಒಸಿಯ ಜಾವೂರ್ ಉಗೆವ್ ವಿರುದ್ಧ ನಡೆದ ಸೆಣೆಸಾಟದಲ್ಲಿ ರವಿ ದಹಿಯಾ 4-7 ಅಂಕಗಳೊಂದಿಗೆ ಉಗೆವ್‌ಗೆ ಶರಣಾದರು.

ಈಗ ಭಾರತಕ್ಕೆ ಎರಡು ಬೆಳ್ಳಿ ಪದಕ ಬಂದಂತಾಗಿದೆ. ಮೀರಾ ಬಾಯಿ ಚಾನು ಮೊದಲಿಗೆ ಬೆಳ್ಳಿ ಪದಕ ಗೆದ್ದಿದ್ದರು. ಇನ್ನು ಕ್ರೀಡಾಕೂಟದಲ್ಲಿ ಭಾರತ ಎರಡು ಬೆಳ್ಳಿ ಮತ್ತು ಮೂರು ಕಂಚು ಸೇರಿ ಒಟ್ಟು ಐದು ಪದಕಗಳನ್ನು ಗೆದ್ದಂತಾಗಿದೆ.

23 ವರ್ಷದ ದಹಿಯಾ ಭಾರತದ ಕಿರಿಯ ಒಲಂಪಿಕ್ ಚಾಂಪಿಯನ್ ಆಗುವ ನಿರೀಕ್ಷೆಯಿತ್ತು. ಆದರೆ ರಷ್ಯನ್ ಆಟಗಾರ ಗೆಲುವು ಸಾಧಿಸಿದ್ದಾರೆ.

2 ಬಾರಿ ವಿಶ್ವಚಾಂಪಿಯನ್ ರಷ್ಯಾದ ಚೌರ್ ಉಗೆವ್ ವಿರುದ್ಧ 7-4 ಅಂಕಗಳಿಂದ ರವಿ ದಹಿಯಾ ಸೋತು ಎರಡನೇ ಸ್ಥಾನವನ್ನು ಪಡೆದರು. ಉಗೆವ್ ಸತತ 16 ಪಂದ್ಯಗಳನ್ನು ಗೆದ್ದು ಒಲಿಂಪಿಕ್ಸ್ ಪ್ರವೇಶಿಸಿದ್ದರು.

ಸೆಮಿಫೈನಲ್‍ನಲ್ಲಿ ಕಝಖಿಸ್ತಾನದ ನುರಿಸ್ಲಾಮ್ ಸನೆವ್ ವಿರುದ್ಧ ಆರಂಭಿಕ ಹಿನ್ನಡೆ ಅನುಭವಿಸಿದರೂ ಭರ್ಜರಿ ಕಮ್‍ಬ್ಯಾಕ್ ಮಾಡುವ ಮೂಲಕ ರವಿ ದಹಿಯಾ ರೋಚಕ ಗೆಲುವಿನೊಂದಿಗೆ ಫೈನಲ್ ಅರ್ಹತೆ ಪಡೆದುಕೊಂಡಿದ್ದರು.

ಹರಿಯಾಣದ ಸೋನಿಪತ್ ಜಿಲ್ಲೆಯ ನಹ್ರಿ ಗ್ರಾಮದಲ್ಲಿ ಜನಿಸಿದ ರವಿ ದಹಿಯಾ ಈ ಹಿಂದೆ 2019ರ ವಿಶ್ವ ಚಾಂಪಿಯನ್‍ಷಿಪ್‍ನ 57 ಕೆಜಿ ವಿಭಾಗದಲ್ಲಿ ಕಂಚು, 2020ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಚಿನ್ನ, 2021ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಸ್ವರ್ಣ, 2018ರ ಅಂಡರ್ 23 ಚಾಂಪಿಯನ್‍ಷಿಪ್‍ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.

ಕುಸ್ತಿ ಕಮಾಲ್: 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಕುಮಾರ್ ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟಿದ್ದರು. ಅದೇ ವರ್ಷ ಯೋಗೀಶ್ವರ್ ದತ್ ಕಂಚಿನ ಪದಕ ಗೆದ್ದರೆ, 2016ರ ರಿಯೊ ಒಲಿಂಪಿಕ್ಸ್‍ನಲ್ಲಿ ಸಾಕ್ಷಿ ಮಲಿಕ್ ಕಂಚು ಗೆದ್ದಿದ್ದರು. 1952ರಲ್ಲಿ ಕೆ.ಡಿ ಜಾಧವ್ ಕಂಚಿನ ಪದಕ ಗೆದ್ದಿದ್ದರು

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು