CrimeNEWSನಮ್ಮರಾಜ್ಯ

ಓವರ್‌ಟೆಕ್ ಮಾಡಿದ KSRTC ಬಸ್ ಚಾಲಕನ ಮೇಲೆ ಆಟೋ ಗ್ಯಾಂಗ್‌ ಹಲ್ಲೆ : ಮೂವರ ಬಂಧನ

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.

ದೊಡ್ಡಬಳ್ಳಾಪುರ ಘಟಕದ ಚಾಲಕ ಪ್ರಸನ್ನ ಎಂಬುವರೆ ಹಲ್ಲೆಗೊಳಗಾದ ಚಾಲಕ. ಮುಂದೆ ಹೋಗುತ್ತಿದ್ದ ಆಟೋ ದಾರಿ ಬಿಡದೆ ಅಡ್ಡದಿಡ್ಡಿ ಚಾಲನೆ ಮಾಡಿದ್ದಾರೆ. ಈ ನಡುವೆ ಕೆಎಸ್​ಆರ್​ಟಿಸಿ ಚಾಲಕ ಓವರ್‌ಟೆಕ್‌ ಮಾಡಿದ್ದರಿಂದ ಆಟೋದಲ್ಲಿದ್ದ ಗೋವಿಂದರಾಜು, ಹನುಮಂತರಾಜು, ನರಸಿಂಹರಾಜು ಸೇರಿ ನಾಲ್ವರು ಬಸ್‌ ತಡೆದು ನಿಲ್ಲಿಸಿ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ಮಂಗಳವಾರ ಮಧ್ಯಾಹ್ನ ಕೆಎಸ್​ಆರ್​ಟಿಸಿ ಬಸ್​ ಮಾಡೇಶ್ವರದಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿತ್ತು. ಈ ವೇಳೆ ತಮಗೆ ದಾರಿ ಬಿಡದೆ ಆಟೋ ಓಡಿಸಿಕೊಂಡು ಹೋಗುತ್ತಿದ್ದರು. ಬಳಿಕ ಬಸ್ ಓವರ್‌ಟೆಕ್‌ ಮಾಡಿದ್ದರಿಂದ ಕುಪಿತಗೊಂಡು ಬಸ್‌ ಅಡ್ಡಗಟ್ಟಿ ಆಟೋದಲ್ಲಿದ್ದ ನಾಲ್ವರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಹಲ್ಲೆಯಿಂದ ಚಾಲಕನನ್ನ ರಕ್ಷಿಸಲು ಹೋದ ನಿರ್ವಾಹಕ ಮತ್ತು ಪ್ರಯಾಣಿಕರ ಮೇಲೂ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಬಸ್​ ಚಾಲಕ ಪ್ರಸನ್ನ ಅವರನ್ನು ಸ್ಥಳೀಯ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ದೊಡ್ಡಬೆಳವಂಗಲ ಪೊಲೀಸರು ನಾಲ್ವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ಈ ರೀತಿಯ ಹಲ್ಲೆಗೊಳಗಾದ ಸಾರಿಗೆ ನೌಕರರ ಹಿತರಕ್ಷಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಸುಪ್ರೀಂ ಮತ್ತು ಹೈಹೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರು ಸಂಘಕಟ್ಟಿ ಆ ಮೂಲಕ ಚಾಲನಾ ಸಿಬ್ಬಂದಿಯ ರಕ್ಷಣೆಗೆ ನಿಂತಿದ್ದಾರೆ. ಆದರೆ, ವಕೀಲರು ತಮ್ಮ ಶ್ರಮಕ್ಕೆ ತಕ್ಕನಾಗಿ ನೌಕರರು ನಡೆದುಕೊಳ್ಳುತ್ತಿಲ್ಲ ಎಂದು ಬೇಸರಗೊಂಡಿದ್ದು, ಸಾಮಾಜಿಕ ಜಾಲತಾಣದಿಂದ ದೂರ ಸರಿದಿದ್ದಾರೆ.

ಇದರ ಜತೆಗೆ ಇನ್ನು ಮುಂದೆ ನಾವು ಸಮಾಜಿಕ ಜಾಲತಾಣದ ಮೂಲಕ ನೌಕರರಿಗೆ ಕಾನೂನಾತ್ಮಕವಾಗಿ ನೀಡುತ್ತಿದ್ದ ಸಲಹೆಗಳನ್ನು ಕೊಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಯಾವುದೇ ಪ್ರಕರಣವಿದ್ದರೂ ಆ ಬಗ್ಗೆ ಕಚೇರಿಯಲ್ಲೇ ಭೇಟಿ ಮಾಡಬೇಕು ಎಂದು ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ