NEWSನಮ್ಮಜಿಲ್ಲೆಸಂಸ್ಕೃತಿ

ಕೆ.ಆರ್.ಪೇಟೆ ಪೊಲೀಸ್ ಠಾಣೆ: ಸಿಬ್ಬಂದಿಗಳಿಗೆ ಮಡಿಲಕ್ಕಿ ತುಂಬಿ ಸೀಮಂತ

ವಿಜಯಪಥ ಸಮಗ್ರ ಸುದ್ದಿ

ಕೃಷ್ಣರಾಜಪೇಟೆ: ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗಳಿಬ್ಬರಿಗೆ ಮಡಿಲಕ್ಕಿ ತುಂಬಿ ಸೀಮಂತ ಮಾಡುವ ಮೂಲಕ ಪೊಲೀಸರು ವಿಶೇಷ ಮತ್ತು ಅರ್ಥಪೂರ್ಣ ಕಾರ್ಯಕ್ರಮ ಮಾಡಿ ಇತರರಿಗೂ ಮಾದರಿಯಾಗಿದ್ದಾರೆ.

ಸರ್ಕಲ್ ಇನ್ಸ್ ಪೆಕ್ಟರ್ ಸುಮಾರಾಣಿ ಅವರು ಗರ್ಭಿಣಿ ಮುತ್ತೈದೆಯರಾದ ಇಬ್ಬರು ಮಹಿಳಾ ಪೇದೆಗಳಿಗೆ ಉಡಿ ತುಂಬಿ, ಮಡಿಲಕ್ಕಿಯನ್ನು ಹಾಕಿ, ಕೊಬ್ಬರಿ ಬೆಲ್ಲ, ತೆಂಗಿನ ಕಾಯಿ ಅರಿಶಿಣ-ಕುಂಕುಮ, ಸೀರೆ ಹಾಗೂ ಬಳೆಗಳನ್ನು ನೀಡಿ ಸೀಮಂತ ಕಾರ್ಯಕ್ರಮ ನಡೆಸಿಕೊಟ್ಟರು.

ಒಂದು ಕುಟುಂಬದಲ್ಲಿ ಹಿರಿಯರೆಲ್ಲರೂ ಒಗ್ಗೂಡಿ ಮಾಡುವ ಸೀಮಂತ ಕಾರ್ಯಕ್ರಮವನ್ನು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಎಲ್ಲ ಆರಕ್ಷಕ ಸಿಬ್ಬಂದಿ ಸಮಕ್ಷಮದಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಪೇದೆಗಳಾದ ಶಾರದಾ ಮತ್ತು ಅಸ್ಮಾಬಾನು ಅವರಿಗೆ ಅವರಿಗೆ ಮಾಡಿ ಶುಭ ಹಾರೈಸಿದರು.

ಆರಕ್ಷಕ ಉಪನಿರೀಕ್ಷಕ ಸುನಿಲ್ ಮಾತನಾಡಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತದಂತೆ ಇಂದು ನನ್ನ ಸಹೋದರಿಯರ ಸಮಾನವಾಗಿರುವ ಅಸ್ಮಾಬಾನು ಹಾಗೂ ಶಾರದಾ ಅವರಿಗೆ ಪಟ್ಟಣ ಪೊಲೀಸ್‌ ಠಾಣೆಯ ಸಿಬ್ಬಂದಿಗಳೆಲ್ಲರೂ ಒಗ್ಗೂಡಿ ಅರ್ಥಪೂರ್ಣವಾಗಿ ಸೀಮಂತ ಕಾರ್ಯವನ್ನು ನಡೆಸಿಕೊಡುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದೇವೆ ಎಂದು ಖುಷಿಪಟ್ಟರು.

ಪೊಲೀಸರೂ ಕೂಡ ಮನುಷ್ಯರೇ, ಸದಾ ಒತ್ತಡಗಳ ಮಧ್ಯದಲ್ಲಿಯೇ ಕೆಲಸ ಮಾಡುತ್ತಿರುವ ನಾವು ಇಂದು ಮಾನವೀಯ ಸಂಬಂಧವನ್ನು ಗಟ್ಟಿಗೊಳಿಸುವ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ ಸಂಬಂಧಗಳ ಮಹತ್ವವನ್ನು ಸಾರಿದ್ದೇವೆ ಎಂದು ಹೇಳಿದರು.

ಸಹಾಯಕ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ್ ಸೇರಿದಂತೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ