CrimeNEWSನಮ್ಮಜಿಲ್ಲೆ

ಕಗ್ಗಲಿಗುಂದಿ ಗ್ರಾಮ: ಮನೆಯ ಬಳಿ ಕುಳಿತಿದ್ದ ಬಾಲಕಿ ಮೇಲೆ ಚಿರತೆ ದಾಳಿ

ವಿಜಯಪಥ ಸಮಗ್ರ ಸುದ್ದಿ

ಹನೂರು: ತಾಲೂಕಿನ ಅರಣ್ಯ ಪ್ರದೇಶದ ಸಮೀಪದಲ್ಲಿರುವ ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿ ಗಂಭೀರ ಗಾಯಗೊಳಿಸುವ ಘಟನೆ ಜರುಗಿದೆ.

ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮನೆ ಮುಂಭಾಗದಲ್ಲಿ ಕುಳಿತಿದ್ದ ಆರೆಳು ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಬಾಲಕಿಯ ಕುತ್ತಿಗೆ ಕಚ್ಚಿದ್ದು ಆಕೆ ಗಂಭೀರವಾಗಿ ಗಾಯೊಂಡಿದ್ದಾಳೆ.

ಚಿರತೆ ಮಗಳ ಮೇಲೆ ದಾಳಿ ಮಾಡಿದ್ದನ್ನು ಸಮೀಪದಲ್ಲೇ ಇದ್ದ ಬಾಲಕಿಯ ತಂದೆ ನೋಡಿ ಕಿರುಚಾಡಿದ್ದಾರೆ. ಅವರ ಕಿರುಚಾಟಕ್ಕೆ ಭಯಗೊಂಡ ಚಿರತೆಯೂ ಅಲ್ಲಿಂದ ಬಾಲಕಿಯನ್ನು ಬಿಟ್ಟು ಓಡಿಹೋಗಿದೆ.

ನಂತರ ಚಿರತೆ ದಾಳಿಯಿಂದ ಗಾಯಗೊಂಡ ಬಾಲಕಿಯನ್ನು ಸಮೀಪದ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.  ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಇತ್ತೀಚಿಗೆ ಕಾಡಂಚಿನ ಗ್ರಾಮಗಳಲ್ಲಿ ಮನುಷ್ಯರ ಮೇಲೆ ಚಿರತೆ ಮತ್ತು ಆನೆಗಳ ದಾಳಿಗಳು ಹೆಚ್ಚಾಗಿದೆ. ಅರಣ್ಯ ಸಮೀಪದ ಗ್ರಾಮಗಳಿಗೆ ಅರಣ್ಯ ಇಲಾಖೆ ಸೂಕ್ತ ರಕ್ಷಣೆ ಕ್ರಮ ಜರುಗಿಸುವ ಮೂಲಕ ಇಂತಹ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಮುಂದಾಗಬೇಕಿದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ