NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ಸಿಗರು ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿ.ಟಿ. ರವಿ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದರು.

ನೆಹರು, ಇಂದಿರಾ ಗಾಂಧಿಯವರ ಒಳ್ಳೆಯ ಕೊಡುಗೆಗಳನ್ನು ನೆನೆಯುತ್ತೇವೆ. ಆದರೆ ಅವರು ಮಾಡಿದ್ದ ಎಲ್ಲವನ್ನೂ ಒಪ್ಪಿಕೊಳುವುದ್ದಕ್ಕೆ ನಾವೇನು ಗುಲಾಮರಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.

ನಮ್ಮ ರಾಜಕೀಯ ವಿರೋಧಿಗಳು ಹಳೆಯ ಗ್ರಾಮಾಫೋನ್ ಪ್ಲೇಟ್ ತಿರುಗಿಸ್ತಾನೆ ಇರುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಒಬ್ಬರು. ಸಿದ್ದರಾಮಯ್ಯನವರು ಅಪ್ ಡೇಟ್ ಆಗಬೇಕು. ನಾವು ಅಂಬೇಡ್ಕರ್ ವಿರೋಧಿಗಳಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್. ನಿಮ್ಮ ಸಾಫ್ಟ್ ವೇರ್ ಅಪ್ಡೇಟ್ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಸಂಸತ್ತಿನಲ್ಲಿ ಕಾಂಗ್ರೆಸ್ ವಿಪಕ್ಷಗಳ ಅಸಹಾಕಾರದ ನಡುವೆಯೂ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. 671 ಒಬಿಸಿ ಸಮುದಾಯಗಳು ನ್ಯಾಯ ಪಡೆಯಲು ಸಾಧ್ಯವಾಗಲಿದೆ. ಮೀಸಲಾತಿ,  ಸಾಮಾಜಿಕ ನ್ಯಾಯ ಬಿಜೆಪಿಯ ಬದ್ಧತೆಯಾಗಿದ್ದು, ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಸಂಸತ್ತನ್ನು ಖಾನ್ ಮಾರ್ಕೆಟ್ ಆಗಿ ಪರಿವರ್ತಿಸಿದ್ದವರು ಕಾಂಗ್ರೆಸ್‍ನವರು ಎಂದು ದೂರಿದರು.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು