NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ 70ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲ್ಲ : ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 70ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಆಗುವುದಿಲ್ಲ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೆ ಸತ್ಯ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ. ರಾಜ್ಯದಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪಯಾತ್ರೆ ಮಾಡಿದ್ದೇವೆ. ವಿಜಯಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.

ಇನ್ನು ಯಾತ್ರೆಯಿಂದ ಕಾಂಗ್ರೆಸ್ ಭಯಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ. ಅದು ಕೇವಲ ತಿರುಕನ ಕನಸಾಗಲಿದೆ ಎಂದರು.

ಇನ್ನು 2-3 ದಿನಗಳಲ್ಲಿ ನಾನು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. 130 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಾಮಾಜಿಕ ನ್ಯಾಯದಡಿ ಮೀಸಲಾತಿ ನೀಡಲಾಗಿದೆ. ಮೀಸಲಾತಿ ವಿಚಾರದಲ್ಲಿ ಮುಸ್ಲೀಮರಿಗೆ ಅನ್ಯಾಯ ಮಾಡಿಲ್ಲ ಮೀಸಲಾತಿ ವಿಚಾರದಲ್ಲಿ ಯಾರಿಗೂ ಕೂಡ ಅನ್ಯಾಯ ಮಾಡಿಲ್ಲ ಎಂದರು.

ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ ಮಾಡಲಿದೆ. 75 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ಮಿಸ್ ಆಗಲಿದೆ. ಹಿರಿಯರಿಗೆ ಟಿಕೆಟ್ ನೀಡೋದು ವರಿಷ್ಠರ ತೀರ್ಮಾನ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ಬಿಎಸ್‌ವೈ ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು