NEWSನಮ್ಮಜಿಲ್ಲೆಬೆಂಗಳೂರು

ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ದಿಢೀರ್‌ ಸ್ಥಗಿತ: ಪ್ರಯಾಣಿಕರ ಪರದಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ದಿಢೀರ್‌ ಎಂದು ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ಇಂದು (ಮಂಗಳವಾರ ಜು.4) ತಾಂತ್ರಿಕ ಸಮಸ್ಯೆಯಿಂದ ನಮ್ಮ ಮೆಟ್ರೋ ಸ್ಥಗಿತವಾಗಿದ್ದು, ಹೆಚ್ಚು ಜನ ಸಂಚರಿಸುವ ಅವಧಿಯಲ್ಲೇ ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದ್ದರಿಂದ ಕಚೇರಿ, ಶಾಲಾ-ಕಾಲೇಜುಗಳೀಗೆ ಹೋಗಲು ಮೆಟ್ರೋ ಅವಲಂಬಿಸಿದ್ದ ಪ್ರಯಾಣಿಕರು ಸಮಸ್ಯೆಗೆ ಸಲುಕಿದರು.

ನೇರಳೆ ಮಾರ್ಗದ ಕೆಂಗೇರಿ – ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಕಾಯುತ್ತಿದ್ದರು. ವಿಷಯ ತಿಳಿದ ಕೂಡಲೇ ಆತಂಕದಲ್ಲೇ ಅವರು ಬೇರೆಬೇರೆ ವ್ಯವಸ್ಥೆ ಮಾಡಿಕೊಂಡರು ಎಂದು ತಿಳಿದು ಬಂದಿದೆ.

ಇನ್ನು ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತವಾಗಿತ್ತು. ಜೂನ್ 30ರಂದು ಎಂಜಿ ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಲ್ಲ ಈ ಬಗ್ಗೆ ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು.

ಆದರೆ, ಇಂದು ಯಾವುದೇ ಮಾಹಿತಿ ನೀಡದೆ ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ಸ್ಥಗಿತವಾಗಿದೆ ಆಗಿದೆ ಎಂದರೆ ಇದಕ್ಕೆ ಯಾರು ಉತ್ತರ ಕೊಡಬೇಕು. ತಾಂತ್ರಿಕ ಸಮಸ್ಯೆ ಆಗದಂತೆ ನೋಡಿಕೊಳ್ಳುವುದಕ್ಕೆ ತಾಂತ್ರಿಕ ಸಿಬ್ಬಂದಿ ಇಲ್ಲವೇ ಎಂದು ಪ್ರಯಾಣಿಕರು ಕಿರಿಕಾರಿದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ