NEWSಸಿನಿಪಥ

ಕೆಜಿಎಫ್ -2 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದಿಲ್ಲವೇ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ -2 ತೆರೆಗೆ ಬರಲು ಸಿದ್ಧವಾಗುತ್ತಿದೆ. ಯಶ್ ಅಭಿಮಾನಿಗಳು ತಮ್ಮ ಹೀರೋನನ್ನು ಬೃಹತ್ ಪರದೆ ಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

ಹೌದು! ಭಾರತದಾದ್ಯಂತ ಭರವಸೆ ಮೂಡಿಸಿರುವ, ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ಕನ್ನಡದ ಕೆಜಿಎಫ್- 2 ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ನೀಡಿದೆ ಚಿತ್ರತಂಡ.

ವರಮಹಾಲಕ್ಷ್ಮೀ ಹಬ್ಬದ ದಿನದಂದು ಶುಭ ಸುದ್ದಿ ನೀಡಿರುವ ಕೆಜಿಎಫ್ -2 ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಚಿತ್ರದ ಸ್ಯಾಟಲೈಟ್ ಪ್ರಸಾರದ ಜೊತೆಗಾರರನ್ನು ಘೋಷಿಸಿದೆ.

ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಕೆಜಿಎಫ್ -2 ಬಿಡುಗಡೆಯಾಗಲಿದ್ದು, ಅವುಗಳ ಸ್ಯಾಟಲೈಟ್ ಪ್ರಸಾರದ ಹಕ್ಕನ್ನು ‘ಜೀ’ ಪಡೆದುಕೊಂಡಿದೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಕೆಜಿಎಫ್ -2 ಬಿಡುಗಡೆಯಾಗಲಿದ್ದು, ಇವುಗಳಿಗೆ ಆಯಾ ಭಾಷೆಯ ಜೀ ಚಾನಲ್​ಗಳು ಪ್ರಸಾರದ ಹಕ್ಕನ್ನು ಪಡೆದುಕೊಂಡಿವೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿ ಮಾಹಿತಿಯನ್ನು ನೀಡಿದೆ.

ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ‘ಕೆಜಿಎಫ್ 2’ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಇನ್ನೂ ಘೋಷಿಸಿಲ್ಲ. ಆದರೆ ಹೊಂಬಾಳೆ ಫಿಲ್ಮ್ಸ್ ಸತತವಾಗಿ ಚಿತ್ರದ ಕುರಿತು ಅಪ್ಡೇಟ್ ನೀಡುತ್ತಿದ್ದು, ಚಿತ್ರತಂಡ ಬಿಡುಗಡೆಯ ಕುರಿತು ಪ್ರಯತ್ನ ಮುಂದುವರಿಸಿರುವುದಂತೂ ನಿಜ.

ಚಿತ್ರದ ಸ್ಯಾಟಲೈಟ್ ಹಕ್ಕು ಬಿಡುಗಡೆಯ ಘೋಷಣೆಯಾದ ತಕ್ಷಣ ಅಭಿಮಾನಿಗಳಿಗೆ ಗೊಂದಲವಾಗಿದ್ದು, ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಲಿದೆಯೇ ಎಂಬ ಪ್ರಶ್ನೆ ಎತ್ತಿದ್ದಾರೆ. ಆದರೆ ವಾಸ್ತವವಾಗಿ ಸ್ಯಾಟಲೈಟ್ ಹಕ್ಕು ಎನ್ನುವುದು ಚಿತ್ರವನ್ನು ಟಿವಿಯಲ್ಲಿ ಪ್ರಸಾರ ಮಾಡಲು ಪಡೆದುಕೊಳ್ಳುವ ಹಕ್ಕು. ಆ ಹಕ್ಕನ್ನು ಜೀ ಪಡೆದುಕೊಂಡಿದೆ.

ಚಿತ್ರದ ಒಟಿಟಿ ಹಕ್ಕನ್ನು ನಿರ್ಮಾಣ ಸಂಸ್ಥೆ ಇನ್ನೂ ಯಾರಿಗೂ ನೀಡಿಲ್ಲ ಮತ್ತು ಈ ಕುರಿತು ಯಾವುದೇ ಘೋಷಣೆಯನ್ನೂ ಹೊರಡಿಸಿಲ್ಲ. ಬಲ್ಲ ಮೂಲಗಳ ಪ್ರಕಾರ ಎಲ್ಲವೂ ಅಂದುಕೊಂಡಂತೆ ನಡೆದರೆ ‘ಕೆಜಿಎಫ್ -2 ’ ಚಿತ್ರಮಂದಿರಗಳಲ್ಲಿಯೇ ಬಿಡುಗಡೆಯಾಗಲಿದೆ.

ತಾರಾಗಣದಲ್ಲಿ: ಕೆಜಿಎಫ್ -2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದು, ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್, ರವೀನಾ ಟಂಡನ್ ಮೊದಲಾದವರು ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಮಾದರಿಯ ಈ ಚಿತ್ರಕ್ಕೆ ಈಗಾಗಲೇ ದೇಶದಾದ್ಯಂತ ಅಭಿಮಾನಿಗಳು ಕಾಯುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು