NEWSನಮ್ಮರಾಜ್ಯ

ಕುಟೀರ, ಭಾಗ್ಯ, ಅಮೃತ ಜ್ಯೋತಿ ಫಲಾನುಭವಿಗಳ 389 ಕೋಟಿ ರೂ. ಬಾಕಿ ವಿದ್ಯುತ್‌ ಬಿಲ್‌ ಮನ್ನಾ: ಕೆ.ಜೆ. ಜಾರ್ಜ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಪ್ರಮುಖ ಮೂರು ವಿದ್ಯುತ್ ಯೋಜನೆಗಳ ಫಲಾನುಭವಿಗಳ 389 ಕೋಟಿ ರೂಪಾಯಿ ಬಾಕಿ ಮೊತ್ತವನ್ನು ಮನ್ನಾ ಮಾಡಲು ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಡವರಿಗೆ ನೀಡುತ್ತಿರುವ ‘ಕುಟೀರಜ್ಯೋತಿ’, ‘ಭಾಗ್ಯಜ್ಯೋತಿ’ ಮತ್ತು ‘ಅಮೃತಜ್ಯೋತಿ’ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ಅಥವಾ ಹೆಚ್ಚಿನ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯುತ್ತಿದ್ದ ಫಲಾನುಭವಿಗಳಿಗೆ 389 ಕೋಟಿ ರೂ.ಗಳ ಬಾಕಿಯನ್ನು ಮನ್ನಾ ಮಾಡಲಾಗುವುದು ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಈ ಮೂರು ಪ್ರಮುಖ ಯೋಜನೆಗಳನ್ನು ನೂತನ ‘ಗೃಹ ಜ್ಯೋತಿ’ ಯೋಜನೆ ಜತೆಗೆ ವಿಲೀನ ಮಾಡಿಕೊಂಡಿದೆ. ವಸತಿ ವಿದ್ಯುತ್ ಸಂಪರ್ಕಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಇದರೊಂದಿಗೆ ಇದೀಗ ಬಾಕಿ ಬಿಲ್ ಅನ್ನು ಮನ್ನಾ ಮಾಡಲಿದೆ ಎಂದು ವಿವರಿಸಿದರು.

ಇನ್ನು ಇದರ ಜತೆಗೆ ರಾಜ್ಯದಲ್ಲಿ ಈ ಹಿಂದೆ ‘ಕುಟೀರ ಜ್ಯೋತಿ’ ಹಾಗೂ ‘ಭಾಗ್ಯ ಜ್ಯೋತಿ’ ಯೋಜನೆಯ ಫಲಾನುಭವಿಗಳಿಗೆ 40 ಹಾಗೂ ‘ಅಮೃತ ಜ್ಯೋತಿ’ ಫಲಾನುಭವಿಗಳು 75 ಯೂನಿಟ್‌ ವಿದ್ಯುತ್‌ಅನ್ನು ಉಚಿತವಾಗಿ ನೀಡಲಾಗುತ್ತಿತ್ತು. ಈಗ 40 ಯೂನಿಟ್ ಪಡೆಯುತ್ತಿರುವವರಿಗೆ 50 ಯೂನಿಟ್ ಜತೆಗೆ 10 ಯೂನಿಟ್ ಸೇರಿಸಲಾಗುತ್ತಿದೆ. ಅಲ್ಲದೆ 75 ಯೂನಿಟ್ ಪಡೆಯುವವರಿಗೆ 75 ಯೂನಿಟ್ ಒದಗಿಸಲು ನಿರ್ಧರಿಸಿದ್ದೇವೆ ಎಂದರು.

ಈಗಾಗಲೇ ಈ ಶೇ.10ರಷ್ಟು ಹೆಚ್ಚುವರಿಯಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದ ಅವರು, ವಿಲೀನಗೊಂಡ ‘ಕುಟೀರಜ್ಯೋತಿ’, ‘ಭಾಗ್ಯಜ್ಯೋತಿ’ ಹಾಗೂ ‘ಅಮೃತ ಜ್ಯೋತಿ’ ಯೋಜನೆಗಳ ಫಲಾನುಭವಿಗಳ ₹389 ಕೋಟಿ ಭಾರಿ ಮೊತ್ತದ ಬಾಕಿ ಇತ್ತು. ಅದನ್ನು ಮನ್ನಾ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇತ್ತೀಚೆಗೆ ಚರ್ಚಿಸಿದ್ದೇವೆ. ಈ ಕುರಿತು ಸರ್ಕಾರ ಒಪ್ಪಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್‌ಗೆ ₹3.17 ದರವನ್ನು ನಿಗದಿಪಡಿಸಿದೆ. ತುಮಕೂರು ಜಿಲ್ಲೆಯ ಪಾವಗಡದ ಅನೇಕ ರೈತರು ಸೌರ ವಿದ್ಯುತ್ ಉತ್ಪಾದಿಸುವವರಿಗೆ 8,000 ಎಕರೆ ಭೂಮಿ ನೀಡಲು ಮುಂದೆ ಬಂದಿದ್ದಾರೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಬೇಸಿಗೆ ವೇಳೆ 16,000 ಮೆಗಾ ವ್ಯಾಟ್ ವರೆಗೆ ವಿದ್ಯುತ್ ಬೇಡಿಕೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಇದು ಹಾಲಿ ಬಳಕೆಯಾಗುತ್ತಿರುವ ವಿದ್ಯುತ್‌ ಗಿಂತಲೂ ಅಧಿಕ ಪ್ರಮಾಣ ಎಂದ ಸಚಿವರು, ಬೇಡಿಕೆಯಷ್ಟು ವಿದ್ಯುತ್‌ ಪೂರೈಕೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ. ಹೆಚ್ಚು ವಿದ್ಯುತ್ ಉತ್ಪಾದಿಸುವ ಜತೆಗೆ ಪಂಜಾಬ್ ಸೇರಿದಂತೆ ಬೇರೆಡೆಯಿಂದ ವಿದ್ಯುತ್ ಪಡೆಯುತ್ತಿದ್ದೇವೆ. ರೈತರಿಗೆ ನಿರಂತರವಾಗಿ ಏಳು ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು