CrimeNEWSಆರೋಗ್ಯ

ಕಂಠಮಟ್ಟ ಕುಡಿದು ಬಂದ ವೈದ್ಯ: ಆಪರೇಷನ್ ಥಿಯೇಟರ್‌ನಲ್ಲೇ ಕುಸಿದುಬಿದ್ದ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಆಪರೇಷನ್ ಥಿಯೇಟರ್‌ಗೆ ಕಂಠಪೂರ್ತಿ ಕುಡಿದು ಬಂದ ವೈದ್ಯ ಶಸ್ತ್ರಚಿಕಿತ್ಸೆ ಮಾಡಲಾಗದೆ ಕುಸಿದು ಬಿದ್ದಿರುವ ಘಟನೆ ಕಳಸ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ಇನ್ನು ವಿಚಿತ್ರವೆಂದರೆ ಶಸ್ತ್ರಚಿಕಿತ್ಸೆ ಮಾಡಬೇಕಿದ್ದ ವೈದ್ಯ ಬಾಲಕೃಷ್ಣನನ್ನು ಸಿಬ್ಬಂದಿಗಳೆ ಎತ್ತಿಕೊಂಡು ಹೋಗಿ ಆಸ್ಪತ್ರೆಯ ಮತ್ತೊಂದು ಬೆಡ್‌ಮೇಲೆ ಮಲಗಿಸಿದ್ದಾರೆ.

ಕಳಸ ತಾಲೂಕು ಆಸ್ಪತ್ರೆಯಲ್ಲಿ 9 ಮಹಿಳೆಯರಿಗೆ ಸಂತಾನಹರಣ ಶಕ್ತಿ ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಈ ಸಂಬಂಧ ಬೆಳಗ್ಗಿನಿಂದಲೇ ಅನಸ್ತೇಷಿಯಾ ಪಡೆದುಕೊಂಡು ಮಹಿಳೆಯರು ಕಾಯುತ್ತಿದ್ದರು. ಆದರೆ ವೈದ್ಯ ಮಾತ್ರ ಕಂಠಪೂರ್ತಿ ಕುಡಿದು ಬಂದಿದ್ದಾನೆ ಇನ್ನು ಎದ್ದು ನಿಲ್ಲಲೂ ಸಾಧ್ಯವಾಗದ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದ್ದಾನೆ.

ಮದ್ಯದ ಅಮಲಿನಲ್ಲಿದ್ದ ವೈದ್ಯ ಬಾಲಕೃಷ್ಣ ಸಿಬ್ಬಂದಿಗಳ ಮಾತು ಕೇಳದೆ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದಾನೆ. ಆದರೆ ಅದೃಷ್ಟವಶಾತ್ ಅಷ್ಟರಲ್ಲೇ ಆತ ಕುಸಿದು ಬಿದ್ದಿದ್ದಾನೆ. ಬಳಿಕ ವೈದ್ಯನನ್ನು ಸಿಬ್ಬಂದಿ ಪಕ್ಕದ ಬೆಡ್ ಮೇಲೆ ಮಲಗಿಸಿದ್ದಾರೆ. ಆ ನಂತರ ಶಸ್ತ್ರಚಿಕಿತ್ಸೆ ರದ್ದು ಮಾಡಲಾಗಿದ್ದು, ಅನಸ್ತೇಷಿಯಾ ಪಡೆದುಕೊಂಡಿದ್ದ ಮಹಿಳೆಯರಿಗೆ ಗ್ಲೂಕೋಸ್ ನೀಡಲಾಯಿತು.

ಗೌರವಾನ್ವಿತ ಹುದ್ದೆಯಲ್ಲಿರುವ ವೈದ್ಯನೊಬ್ಬ ಕುಡಿದು ಬಂದು ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದ ಘಟನೆ ಹೊರಬೀಳುತ್ತಿದ್ದಂತೆ ಮಹಿಳೆಯರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಿಬ್ಬಂದಿ ವೈದ್ಯನ ತಪ್ಪನ್ನು ಮರೆಮಾಚಲು ಪ್ರಯತ್ನಿಸಿದ್ದು, ಶುಗರ್ ಕಾರಣದಿಂದ ಕುಸಿದು ಬಿದ್ದಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಕ್ರಮ ಕೈಗೊಳ್ಳಲಾಗುವುದು: ಘಟನೆಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ಮಹಿಳೆಯರ ಕುಟುಂಬಸ್ಥರು, ತಪ್ಪಿತಸ್ಥ ವೈದ್ಯನ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಉಮೇಶ್ ಪ್ರತಿಕ್ರಿಯಿಸಿ, ಕರ್ತವ್ಯದ ವೇಳೆ ವೈದ್ಯರ ಅಶಿಸ್ತಿನ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು