CrimeNEWSದೇಶ-ವಿದೇಶ

ಕಿಡಿಗೇಡಿಗಳ ಗುಂಪು: ಇಬ್ಬರು ಮಹಿಳೆಯರ ಬೆತ್ತಲೇ ಮೆರವಣಿಗೆ ಮಾಡಿ ಬಳಿಕ ಅತ್ಯಾಚಾರ

ವಿಜಯಪಥ ಸಮಗ್ರ ಸುದ್ದಿ

ಮಣಿಪುರ: ಇಲ್ಲಿ ನಡೆದ ಹಿಂಸಾಚಾರ, ಗಲಭೆ, ದಾಳಿಗೆ ಬಹುತೇಕ ರಾಜ್ಯವೇ ಸುಟ್ಟುಹೋಗಿದೆ. ಈ ನಡುವೆಯೇ ಮೇ 4 ರಂದು ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೇ ಮೆರವಣಿಗೆ ಮಾಡಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ.

ಮೇ 4 ರಂದು ನಡೆದಿದೆ ಎನ್ನಲಾಗಿರುವ ಈ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ! ಇದರಿಂದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಮೂರ್ನಾಲ್ಕು ತಿಂಗಳುಗಳಿಂದ ಮಣಿಪುರ ಬೇಡದ ವಿಚಾರಗಳಿಗೆ ಹೆಚ್ಚು ಸುದ್ದಿಯಾಗುತ್ತಿದೆ. ಜನಾಂಗೀಯ ಹಿಂಸಾಚಾರಕ್ಕೆ ಒಳಗಾಗಿರುವ ಮಣಿಪುರದಲ್ಲಿ, ಅಮಾನುಷ ಕೃತ್ಯಗಳು ನಡೆದು ಹೋಗಿವೆ.

ಏನಿದು ವಿಡಿಯೋ..?: ಕಂಗ್ಪೊಕ್ಪಿ ಜಿಲ್ಲೆಯಲ್ಲಿ ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರಗೈದು, ಬಳಿಕ ಮೆರವಣಿಗೆ ಮಾಡಿದ ವಿಡಿಯೋ ಅದಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಯುವತಿ ಕುಕಿ ಸಮುದಾಯಕ್ಕೆ ಸೇರಿದವಳಾಗಿದ್ದಾಳೆ. ಆಕೆಗೆ ಕೇವಲ 19 ವರ್ಷ.

ಕಿಡ್ನಾಪ್ ಮಾಡಿ ವಿಕೃತಿ..!: ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಮೂವರು ಮಹಿಳೆಯರು ಸೇರಿ ಒಟ್ಟು ಐವರನ್ನು ಅಪಹರಿಸಿ ವಿವಸ್ತ್ರಗೊಳಿಸಲಾಗಿದೆ. ನಂತರ 19 ವರ್ಷದ ಯುವತಿ ಮೇಲೆ ರೇಪ್ ನಡೆದಿದೆ. ಮಾತ್ರವಲ್ಲ, ಈಕೆಯ ತಮ್ಮನನ್ನು ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯವನ್ನು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಖಂಡಿಸಿದ್ದು, ಮನುಷ್ಯತ್ವ ಅಪರಾಧದ ವಿರೋಧಿಯಾಗಿದೆ. ವಿಡಿಯೋ ಆಧಾರದ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಆದೇಶ ನೀಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಂದು ಏನಾಗಿತ್ತು ಮಣಿಪುರದಲ್ಲಿ..?: ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಈ ಘಟನೆ ಬಗ್ಗೆ ಮೇ 4 ರಂದೇ ನಮಗೆ ದೂರು ಬಂದಿದೆ. ಆದರೆ ಅಪರಿಚಿತರ ವಿರುದ್ಧ ಜೂನ್ 21 ರಂದು ಗ್ಯಾಂಗ್​ ರೇಪ್​​, ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದು ಕೊಂಗ್ಪೊಕ್ಪಿ ಜಿಲ್ಲೆಯಲ್ಲಿ ನಡೆದಿದೆ ಎಂದಿದ್ದಾರೆ.

ಅಂದು 800 ರಿಂದ 1000 ಮಂದಿ ಶಸ್ತ್ರಸಜ್ಜಿತವಾಗಿ ಬಂದು ಮಣಿಪುರದಲ್ಲಿ ಹಿಂಸಾಚಾರ ಮಾಡಿದ್ದರು. ಇವರು, AK ರೈಫಲ್ಸ್​​, ಎಸ್​​ಎಎಲ್​​ಆರ್ (SALR)​, ಐಎನ್​​​ಎಸ್​​ಎಎಸ್ (INSAS)​ ಮತ್ತು 303 ರೈಫಲ್ಸ್​​ ಹಿಡಿದು ಗ್ರಾಮಗಳಿಗೆ ನುಗ್ಗಿದ್ದರು. ಗ್ರಾಮದಲ್ಲಿದ್ದ ಅಂಗಡಿ, ಮನೆ-ಮಠಗಳನ್ನು ಧ್ವಂಸ ಮಾಡಿ ಹಿಂಸಾಚಾರ ನಡೆಸಿದ್ದರು.

ಮೂವರನ್ನು ವಿವಸ್ತ್ರಗೊಳಿಸಿದ್ದರು: ಇದೇ ಸಂದರ್ಭದಲ್ಲಿ ಗ್ರಾಮದಲ್ಲಿದ್ದ ಐವರನ್ನು ಅಪಹರಿಸಲಾಗಿತ್ತು. ಅವರಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಅಪಹರಣಕ್ಕೆ ಒಳಗಾಗಿದ್ದರು. ಪೊಲೀಸ್ ಠಾಣೆಯಿಂದ ಸುಮಾರು 2 ಕಿಲೋ ಮೀಟರ್ ದೂರದಲ್ಲಿರುವ ಕಾಡಿಗೆ ಅವರನ್ನು ಎಳೆದೊಯ್ದಿದ್ದರು.

ಅಲ್ಲಿ ಅತ್ಯಾಚಾರಿಗಳ ತಂಡ ಮೊದಲು ಓರ್ವ ವ್ಯಕ್ತಿಯನ್ನು ಕೊಲೆ ಮಾಡಿದೆ. ನಂತರ ಮೂವರು ಮಹಿಳೆಯರ ನಗ್ನಗೊಳಿಸಿದ್ದಾರೆ. ಅವರ ಎದುರಲ್ಲೇ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆ ಬಳಿಕ ಯುವತಿಯನ್ನು ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ.

ವಿಪಕ್ಷಗಳಿಂದ ಖಂಡನೆ..!: ಮಣಿಪುರದಲ್ಲಿ ನಡೆದ ಘಟನೆಯನ್ನು ವಿಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, ಮಣಿಪುರದಲ್ಲಿ ನಡೆದಿರುವ ಈ ಘಟನೆ ಆತಂಕಕಾರಿ. ಸಾರ್ವಜನಿಕರು ಯಾರೂ ಕೂಡ ಇಂತಹ ವಿಡಿಯೋಗಳನ್ನು ಶೇರ್ ಮಾಡಬಾರದು ಎಂದು ಮನವಿ ಮಾಡಿಕೊಳ್ತೇನೆ. ಇಂತಹ ಕೃತ್ಯಗಳು ನಾಚಿಕೆಗೇಡಿನ ಸಂಗತಿ, ಇದನ್ನು ಯಾರೂ ಕೂಡ ಸಹಿಸಬಾರದು ಎಂದಿದ್ದಾರೆ.

ನಾರಿ ಶಕ್ತಿಗೆ ಎಲ್ಲಿದೆ ನ್ಯಾಯ..?: ತೃಣಮೂಲ ಕಾಂಗ್ರೆಸ್​ ಎಂದಿನಂತೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಮಣಿಪುರದಲ್ಲಿ ಇಂತಹ ಕೃತ್ಯಗಳು ನಡೆದರೂ, ನಮ್ಮ ಪ್ರಧಾನಿಗಳು ಕಣ್ಮುಚ್ಚಿ ಕೂತಿದ್ದಾರೆ. ಅವರು ಮೌನ ಮುರಿಯಬೇಕಿದೆ. ಕಳೆದ 78 ದಿನಗಳಿಂದ ಹಿಂಸಾಚಾರಕ್ಕೆ ಸಂಬಂಧಿಸಿದ ಸುದ್ದಿಗಳು ಬರುತ್ತಲೇ ಇವೆ. ನಾರಿ ಶಕ್ತಿ ಎಂದು ಹೇಳಿಕೊಳ್ಳುವ ಬಿಜೆಪಿ, ಎಲ್ಲಿ ಅವರಿಗೆ ನ್ಯಾಯ ಒದಗಿಸಿದೆ ಎಂದು ಟ್ವೀಟ್ ಮಾಡಿದೆ.

ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ, ಮಣಿಪುರ ಹಿಂಸಾಚಾರ ಬಗ್ಗೆ ಯಾಕೆ ಪ್ರಧಾನಿ ಹಾಗೂ ಕೇಂದ್ರ ಸರ್ಕಾರ ಕಣ್ಮುಚ್ಚಿ ಕೂತಿದೆ. ಈ ರೀತಿಯ ವಿಡಿಯೋಗಳನ್ನು ನೋಡಿದಾಗಲೂ ಅವರ ಮನಸ್ಸು ಕಲುಷಿತಗೊಳ್ಳುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ